ಬೆಂಗಳೂರು:ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್​.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕ, ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

#WATCH| Bengaluru: Karnataka Governor Thaawarchand Gehlot administers oath of office; senior Congress leader RV Deshpande becomes pro-tem Speakerpic.twitter.com/lvGzK61VJh
ಇದನ್ನೂ ಓದಿ:ಅಧಿಕಾರ ತಲೆಗೇರಿದ್ರೆ ಇಳಿಸ್ತಾನೆ ಮತದಾರ!
ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್, ದೇವನಹಳ್ಳಿ ಶಾಸಕ ಕೆ.ಎಚ್​.ಮುನಿಯಪ್ಪ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದರು. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್​ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 12 ವರ್ಷದ ನಂತರ ಮತ್ತೆ ವಿಧಾನಸೌಧಕ್ಕೆ ಹೆಜ್ಜೆ ಇಡುತ್ತಿದ್ದೇನೆ. ನಮ್ಮ ಪಕ್ಷಕ್ಕೆ ಜನರು ಆಶೀರ್ವಾದ ಮಾಡಿದ್ದರಿಂದ ನಾನು ಚುನಾವಣೆಯಲ್ಲಿ ಗೆದ್ದು ವಿಧಾನಸೌಧ ಪ್ರವೇಶ ಮಾಡಿದ್ದೇನೆ. ಕರ್ನಾಟಕದ ಜನರ ಒಳಿತಿಗಾಗಿ ಕಲ್ಯಾಣ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ನಾನೊಬ್ಬನೇ ಗೆದ್ದು ವಿಧಾನಸೌಧಕ್ಕೆ ಹೆಜ್ಜೆ ಇಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಹುಮತದಿಂದ ವಿಧಾನಸೌಧಕ್ಕೆ ಬರುತ್ತೇನೆ. ಜನಪರವಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಇರುತ್ತದೆ. ಯಾರಿಗಾದರು ನನ್ನ ಅವಕಾಶ ಇದ್ದರೆ ಬೆಂಬಲ ಕೊಡುತ್ತೇನೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
