ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಗದಿ ಮಾಡಿದ್ದಾರೆ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.
“ಚರ್ಮ ಶಿಲ್ಪ” ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಇನ್ನೊಂದೆಡೆ, ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ ಸಿಗಲಿದೆ. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂಪಾಯಿ ಅನುದಾನವನ್ನು ಸಿಎಂ ಮೀಸಲಿಟ್ಟಿದ್ದಾರೆ.
ಉದ್ಯೋಗಾವಕಾಶ ಸೃಷ್ಟಿ ಕಡೆಗೂ ಗಮನ ಹರಿಸಿರುವ ಸರ್ಕಾರ, ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವನ್ನೂ ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
