ಬೆಂಗಳೂರು:ಯಕ್ಷಲೋಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಸಮಗ್ರ ಯಕ್ಷಗಾನ ಸಮ್ಮೇಳನ ನಡಸಲು ನಿರ್ಧರಿಸಲಾಗಿದೆ. ಸಚಿವ ವಿ.ಸುನೀಲ್ ಕುಮಾರ್ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ನೇತೃತ್ವದಲ್ಲಿ ಸೋಮವಾರ ಈ ಸಂಬಂಧ ಮಹತ್ವದ ಸಭೆ ನಡೆಸಲಾಗಿದ್ದು, ಫೆ.11 ಮತ್ತು 12ರಂದು ಉಡುಪಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಕರಾವಳಿ ಜಿಲ್ಲೆಗಳ ಗಂಡುಕಲೆ ಯಕ್ಷಗಾನದ ಸಮಸ್ಯೆ, ಭವಿಷ್ಯ ಹಾಗೂ ಸಮಕಾಲೀನ ಸ್ಥಿತಿಗತಿಗಳನ್ನು ಅವಲೋಕಿಸುವ ಸಲುವಾಗಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಸಮ್ಮೇಳನ ಆಯೋಜಿಸುತ್ತಿದೆ. ಸಚಿವ ಸುನೀಲ್ ಕುಮಾರ್ ಕೂಡ ಉಡುಪಿ‌ ಜಿಲ್ಲೆಯವರೇ ಆಗಿರುವುದರಿಂದ ವಿಶೇಷ ಆಸ್ಥೆ ವಹಿಸಿ ಕಾರ್ಯಕ್ರಮ‌ ರೂಪಿಸಲು ನಿರ್ಧರಿಸಲಾಗಿದೆ.
ಯಕ್ಷಗಾನ ರಂಗದ ಘನ ವಿದ್ವಾಂಸರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಯಕ್ಷಗಾನದ ಸಮಸ್ಯೆ, ಸಾಧನೆಗಳ ಬಗ್ಗೆ ಗೋಷ್ಠಿಗಳನ್ನು ಆಯೋಜಿಸಲಾಗುತ್ತದೆ. ಫೆ.11, 12ರಂದು ಅಹೋರಾತ್ರಿ ಯಕ್ಷಗಾನ ಪ್ರದರ್ಶನ, ಗೋಷ್ಠಿ, ತಾಳಮದ್ದಳೆ, ಪುಸ್ತಕ ಮಾರಾಟ ನಡೆಯುತ್ತದೆ. ತೆಂಕು, ಬಡಗು, ಮೂಡಲಪಾಯ ಸೇರಿದಂತೆ ಯಕ್ಷಗಾನದ ಎಲ್ಲ ಪ್ರಭೇದಗಳಿಂದ ಪ್ರದರ್ಶನ ನಡೆಸಲಾಗುತ್ತದೆ. ಮೇಳ ಹಾಗೂ ಕಲಾವಿದರ ಸಮಸ್ಯೆ ಬಗ್ಗೆ ಪ್ರತ್ಯೇಕ ಗೋಷ್ಠಿ ಆಯೋಜಿಸಲಾಗಿದೆ.
ಯಕ್ಷಗಾನ ರಾಜ್ಯದ ಗಂಡುಕಲೆ. ಈ ಕಲಾಪ್ರಕಾರದ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದೆ. ಎಲ್ಲ ತಿಟ್ಟುಗಳ ಶ್ರೀಮಂತ ಕಲಾ ಪ್ರದರ್ಶನದ ಜತೆಗೆ ವಿದ್ವಜ್ಜನ ಮೆಚ್ಚುವ ರೀತಿ ಸಮ್ಮೇಳನ ನಡೆಸುತ್ತೇವೆ.
|ವಿ. ಸುನೀಲ್​ಕುಮಾರ್, ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ
ನಿಮ್ಮ ಮುಖಕ್ಕೆ ಬಣ್ಣ ಬೇಕೆ?:ಸಮ್ಮೇಳನದ ಭಾಗವಾಗಿ ನಿಮ್ಮ ಮುಖಕ್ಕೆ ಬಣ್ಣ ಬೇಕೇ ಎಂಬ ವರ್ಣ ವೈಭವ ಆಯೋಜಿಸಲಾಗಿದೆ. ಆಸಕ್ತರಿಗೆ ತೆಂಕು-ಬಡಗು ಶೈಲಿಯಲ್ಲಿ ಬಣ್ಣ ಹಚ್ಚಿ ವೇಷ ಕಟ್ಟಲಾಗುತ್ತದೆ. ಒಟ್ಟಾರೆಯಾಗಿ ಒಂದು ಸಾಹಿತ್ಯ ಸಮ್ಮೇಳನದಲ್ಲಿ ಯಾವ ಅಂಶಗಳು ಅಡಕವಾಗುತ್ತದೆಯೋ ಅವೆಲ್ಲವೂ ಯಕ್ಷ ಸಾಹಿತ್ಯ ಸಮ್ಮೇಳನದಲ್ಲಿ ಕಾಣಸಿಗುತ್ತದೆ. ಕರೊನಾ ಕಾಲ ಘಟ್ಟದ ಬಳಿಕ ಯಕ್ಷಗಾನ ಪ್ರದರ್ಶನ ಹಾಗೂ ತಿರುಗಾಟದಲ್ಲಿ ಮಹತ್ವದ ಬದಲಾವಣೆಯಾಗುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯೇ ಸ್ವಯಂಪ್ರೇರಣೆಯಿಂದ ಇಂಥದ್ದೊಂದು ಸಮ್ಮೇಳನದ ಆಯೋಜನೆಗೆ ಮುಂದಾಗಿರುವುದು ಯಕ್ಷಗಾನಪ್ರಿಯರಲ್ಲಿ ಕುತೂಹಲ ಸೃಷ್ಟಿಸಿದೆ.
ಸನ್ಮಾನ:ಕಾರ್ಯಕ್ರಮದ ಭಾಗವಾಗಿ ಯಕ್ಷರಂಗದ ಮೇಳದ ಯಜಮಾನರಿಗೆ, ಪಿಎಚ್​​ಡಿ ಪ್ರಬಂಧ ಮಂಡಿಸಿದವರಿಗೆ ಹಾಗೂ ಬಡ ಕಲಾವಿದರಿಗೆ ಸನ್ಮಾನಿಸಲು ನಿರ್ಧರಿಸಲಾಗಿದೆ. ಸ್ವಾಗತ ಸಮಿತಿ, ವೇದಿಕೆ, ಆಹಾರ, ಮೂಲಸೌಕರ್ಯಕ್ಕಾಗಿ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ.
13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು!

ಸಾಲ ತೀರಿಸಿಲ್ಲ ಅಂತ ಆಟೋಚಾಲಕನ ಪತ್ನಿ ಮೇಲೆ ಅತ್ಯಾಚಾರ; ದೇವಸ್ಥಾನಕ್ಕೆ ಕರೆದೊಯ್ದು ಹಣೆಗೆ ಸಿಂಧೂರ ಹಚ್ಚಿ ಹೆಂಡ್ತಿ ಎಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
