ಬೆಂಗಳೂರು:ಕರ್ನಾಟಕದಲ್ಲಿ ಬುಧವಾರ ಕರೊನಾ ಮಹಾಸ್ಫೋಟ ಕಂಡಿದೆ. ಒಂದೇ ದಿನ 39 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈವರೆಗಿನ ಏಕದಿನ ಏರಿಕೆಯಲ್ಲಿ ಇದು ದಾಖಲೆಯಾಗಿದೆ.
ಎಂದಿನಂತೆ ಇಂದೂ ಕೂಡ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣ ದೃಢವಾಗಿದೆ. ಬೆಂಗಳೂರಿನಲ್ಲಿ 22,596, ಮೈಸೂರಿನಲ್ಲಿ 1759, ಕೋಲಾರದಲ್ಲಿ 1194, ತುಮಕೂರಿನಲ್ಲಿ 1174, ಬಳ್ಳಾರಿಯಲ್ಲಿ 1106, ಹಾಸನದಲ್ಲಿ 1001 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದಂತೆ ಹಾವೇರಿ ಹೊರೆತುಪಡಿಸಿ ಬೇರೆಲ್ಲ ಜಿಲ್ಲೆಗಳಲ್ಲಿ ಮೂರಂಕಿಯ ಸಂಖ್ಯೆ ವರದಿಯಾಗಿದೆ. ಹಾವೇರಿಯಲ್ಲಿ 36 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 137 ಸೋಂಕಿತರು ಸೇರಿ 229 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ. ಅದರಲ್ಲಿ 10,95,883 ಮಂದಿ ಬಿಡುಗಡೆಯಾಗಿದ್ದು, 3,28,884 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಈವರೆಗೆ ಮೃತರ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ. ಬೆಂಗಳೂರು ಒಂದೇ ಜಿಲ್ಲೆಯಲ್ಲಿ ಈವರೆಗೆ 7,10,347 ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ 2,24,152 ಸಕ್ರಿಯ ಪ್ರಕರಣಗಳು ಬಾಕಿಯಿವೆ.
21 ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದವ ಲಾಕ್​ಡೌನ್​ನಿಂದಾಗಿ ಮರಳಿ ತಂದೆ-ತಾಯಿ ಬಳಿ!

ಪೆರ್ಡೂರು ಮೇಳದ ಹೆಸರಾಂತ ಯಕ್ಷಗಾನ ಕಲಾವಿದ ನಾಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 6 =
Remember me
