ಬೆಂಗಳೂರು:ರಾಜ್ಯದಲ್ಲಿನ ಹೊಸ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರದ ವತಿಯಿಂದಲೇ ನಿರ್ವಹಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸದ್ಯಕ್ಕೆ ನಾವು ಸಾವಿರಾರು ಕೋಟಿ ರೂಪಾಯಿ ವಿನಿಯೋಗಿಸಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಆದರೆ ಇವುಗಳನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟುಕೊಡುತ್ತಿದ್ದೇವೆ. ಅವರು, ಇವುಗಳನ್ನು ಅದಾನಿ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಗೆ ವಹಿಸುತ್ತಿದ್ದಾರೆ. ಹೀಗಾಗಿ ನಮ್ಮದೇ ವಿಮಾನ ನಿಲ್ದಾಣಗಳ ಮೇಲೆ ನಮಗೆ ಯಾವ ಹಕ್ಕೂ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅಂಗಡಿ ಮುಂದೆ ಕಾಡಾನೆ ಕಲಾಕೃತಿ ನಿರ್ಮಿಸಿದ ವ್ಯಾಪಾರಿ; ಇದಕ್ಕೆ ಕಾರಣ ಅದೊಂದು ನಂಬಿಕೆ!
ನಮ್ಮ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ಭಾವನೆ ಇದೆ. ವಿಮಾನ ನಿಲ್ದಾಣ ಪ್ರಾಧಿಕಾರದವರು ಯಾರಿಗೋ ವಹಿಸುವ ಬದಲು ನಾವೇ ಆ ಕೆಲಸವನ್ನು ಮಾಡಬಹುದು. ಸದ್ಯಕ್ಕೆ ಇದನ್ನು ಎಲ್ಲ ಮಗ್ಗುಲಿನಿಂದಲೂ ಪರಿಶೀಲಿಸಲಾಗುತ್ತಿದೆ. ಮಹಾರಾಷ್ಟ್ರದ ಮಾದರಿಯನ್ನೂ ಗಮನಿಸುತ್ತಿದ್ದೇವೆ. ಸದ್ಯದ ವ್ಯವಸ್ಥೆಯಲ್ಲಿ ರಾಜ್ಯದ ಅಹವಾಲುಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಕನಿಷ್ಠ ಪಕ್ಷ ಆಲಿಸುವುದೂ ಇಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + 13 =
Remember me
