ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಬುಧವಾರ ತಿರುಪತಿ ತಿಮ್ಮಪ್ಪನ‌ ದರುಷನ ಪಡೆದರು.
ಮಂಗಳವಾರ ರಾತ್ರಿ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತಿರುಮಲ ಬೆಟ್ಟಕ್ಕೆ ಆಗಮಿಸಿದ್ದ ಅವರು ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದರು.
ನಾಡಿನ ಜನತೆಗೆ ಒಳಿತಾಗಲೆಂದು, ನಾಡಿನಲ್ಲಿ ಸುಖಶಾಂತಿ ನೆಲೆಸಲಿ, ಮಳೆ ಸುರಿದು ಸುಭಿಕ್ಷೆ ಉಂಟಾಗಲೆಂದು ಅವರು ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − nine =
Remember me
