ಬೆಂಗಳೂರು:ಕೃಷಿಕನಾಗುವುದು ತಪ್ಪಲ್ಲ. ಕೃಷಿಕ ಎಂದು ಹೇಳಲು ನಾಚಿಕೆ ಏಕೆ? ಕಾಸ್ ಟೈಟಲ್‌ನಲ್ಲಿ ಉದ್ಯೋಗದ ಮಾಹಿತಿ ಉಲ್ಲೇಖಿಸಿಲ್ಲ. ಕೃಷಿ ಅತ್ಯುತ್ತಮ ಉದ್ಯೋಗ. ಅದು ಜಗತ್ತಿನ ಅತಿ ಹಳೆಯ ಉದ್ಯೋಗ. ಇದಕ್ಕೆ ನಾಚಿಕೆಪಡಬಾರದು. ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು. ಕೃಷಿ ಉದ್ಯೋಗದ ಬಗ್ಗೆ ಹೆಮ್ಮೆ ಇರಬೇಕು…ಹೀಗೆ ಹೇಳಿದ್ದು ಹೈಕೋರ್ಟ್….
ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಆಕ್ಷೇಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ, ಅರ್ಜಿದಾರರನ್ನು ಕುರಿತು ಏನು ಕೆಲಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಆಗ ಅರ್ಜಿದಾರರ ಪರ ವಕೀಲರು ಕೃಷಿಕ ಎಂದು ಸಣ್ಣ ಧ್ವನಿಯಲ್ಲಿ ಹೇಳಿದರು. ಆಗ ಪೀಠವು ನಿಮ್ಮ ಉದ್ಯೋಗದ ಬಗ್ಗೆ ನಿಮಗೆ ನಾಚಿಕೆ ಏಕೆ? ಕೃಷಿಕನಾಗುವುದು ತಪ್ಪಲ್ಲ. ಕೃಷಿಕ ಎಂದು ಹೇಳಲು ನಾಚಿಕೆ ಏಕೆ? ಕಾಸ್ ಟೈಟಲ್‌ನಲ್ಲಿ ಉದ್ಯೋಗದ ಮಾಹಿತಿ ಉಲ್ಲೇಖಿಸಿಲ್ಲ. ಕೃಷಿ ಅತ್ಯುತ್ತಮ ಉದ್ಯೋಗ. ಅದು ಜಗತ್ತಿನ ಅತಿ ಹಳೆಯ ಉದ್ಯೋಗ. ಇದಕ್ಕೆ ನಾಚಿಕೆ ಪಡಬಾರದು ಎಂದಿದ್ದಾರೆ.
ಈ ವೇಳೆ ನ್ಯಾ.ದೀಕ್ಷಿತ್ ಅವರು ಕವಿ ಸರ್ವಜ್ಞ ಅವರ ತ್ರಿಪದಿ ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು, ಮೇಟಿಯಂ ರಾಟಿ ನಡೆದುದಲ್ಲವೇ ಲೋಕಕ್ಕೆ, ಮೇಟಿಯೇ ಶ್ರೇಷ್ಠ ಸರ್ವಜ್ಞ ಎಂದು ಹೇಳಿದರು. ಸರ್ವಜ್ಞನ ತ್ರಿಪದಿಯತ್ತ ಬೊಟ್ಟು ಮಾಡಿದ ಸಿಜೆ ಅವರು ಕೋಟ್ಯಂತರ ಉದ್ಯೋಗಗಳಲ್ಲಿ ಕೃಷಿ ಶ್ರೇಷ್ಠ. ಇದರ ಬಗ್ಗೆ ಹೆಮ್ಮೆ ಇರಬೇಕು ಎಂದರು.
ಆಗ ಅರ್ಜಿದಾರರ ಪರ ವಕೀಲರು ಆದಾಯ ತೆರಿಗೆ ಇಲಾಖೆಯ ದಾಳಿ ಇರುವುದಿಲ್ಲ ಎಂದು ಲಘು ದಾಟಿಯಲ್ಲಿ ಹೇಳಿದರು. ಇದಕ್ಕೆ ಪೀಠವು ಅವೆಲ್ಲಾ ಲಾಭಗಳು. ಕೃಷಿಕನಾಗಿರುವುದಕ್ಕೆ ಹೆಮ್ಮೆ ಇರಬೇಕು. ಏಕೆಂದರೆ ದೇಶಬಾಂಧವರಿಗೆ ರೈತರು ಅನ್ನ ನೀಡುತ್ತಾರೆ ಎಂದರು. ನ್ಯಾ.ದೀಕ್ಷಿತ್ ಅವರು ಕಾಸ್ ಟೈಟಲ್‌ನಲ್ಲಿ ಏಕೆ ಉದ್ಯೋಗ ಉಲ್ಲೇಖಿಸಿಲ್ಲ. ಮಂಗಳ ಸೂತ್ರವನ್ನು ಕುತ್ತಿಗೆಗೆ ಕಟ್ಟಬೇಕು. ಬೇರೆಲ್ಲೂ ಅಲ್ಲ ಎಂದು ಚಟಾಕಿ ಹಾರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 3 =
Remember me
