ಬೆಂಗಳೂರು: ಕರೊನಾ ವೈರಸ್ Covid 19 ಸೋಂಕು ತೀವ್ರಗೊಳ್ಳುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಕಾಲ ಕರ್ನಾಟಕ ಬಂದ್​ ಘೋಷಣೆಯನ್ನು ಇನ್ನಷ್ಟು ದಿನಗಳವರೆಗೆ ವಿಸ್ತರಿಸುವತ್ತ ಸರ್ಕಾರ ಒಲವು ವ್ಯಕ್ತಪಡಿಸಿದೆ. ಕಳೆದ ವಾರ ಘೋಷಿಸಿದ ಬಂದ್​ ಅವಧಿ ಶನಿವಾರ ಮುಕ್ತಾಯ ಗೊಳ್ಳುತ್ತಿದ್ದು, ಸೋಂಕು ಹರಡದಂತೆ ತಡೆಯಲು ಹೆಚ್ಚಿನ ಮುತುವರ್ಜಿ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಬಗ್ಗೆ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿ, ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಕರೊನಾ ಸೋಂಕು ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಬಳಿಕ ಒಂದು ತೀರ್ಮಾನಕ್ಕೆ ಬಂದು ಇನ್ನಷ್ಟು ಕ್ರಮಗಳ ವಿವರಗಳನ್ನು ಸಂಜೆ ವೇಳೆಗೆ ತಿಳಿಸುವುದಾಗಿ ಘೋಷಿಸಿದ್ದಾರೆ.
ಕರೊನಾ ವೈರಸ್ ಸೋಂಕು ತಡೆಗೆ ಸಾಕಷ್ಟು ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಪರಿಣಾಮ ಒಂದಷ್ಟು ಸುಧಾರಣೆಗಳನ್ನು ನಾವು ಕಂಡಿದ್ದೇವೆ. ಆದಾಗ್ಯೂ, ಸೋಂಕು ಹರಡುವ ಕಾರಣ ಇನ್ನಷ್ಟು ದಿನಗಳ ಅವಧಿಗೆ ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮ, ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯ. ಅಮೆರಿಕದಂತಹ ಮುಂದುವರಿದ ರಾಷ್ಟ್ರಗಳಲ್ಲೇ ಅಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವಾಗ ನಾವು ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಸಿಎಂ ಹೇಳಿದರು.
ಕಲಬುರಗಿಯಲ್ಲಿ ಕರೋನಾ ಎಫೆಕ್ಟ್​: ಪೆಟ್ರೋಲ್​ಗಾಗಿ ರಾತ್ರೋರಾತ್ರಿ ಕ್ಯೂ ನಿಂತ ಜನ, ವೈದ್ಯನ ಮನೆಯ 7 ಸದಸ್ಯರು ಸೇರಿ 450 ಜನರಿಗೆ ಹೋಮ್ ಐಸೋಲೇಷನ್

https://www.instagram.com/p/B93SrAMnYoy/?utm_source=ig_web_copy_link
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × three =
Remember me
