ಹಾವೇರಿ:ಇಲ್ಲಿನ ಚಿಕ್ಕ ಮೈಲಾರ ಖ್ಯಾತಿಯ ಹಾವನೂರು ಗ್ರಾಮದಲ್ಲಿ ಸುಮಾರು 354 ವರ್ಷಗಳ ಇತಿಹಾಸ ಇರುವ ಕಾರ್ಣಿಕೋತ್ಸವ ನಡೆಯಿತು.
ಈ ವೇಳೆ ಗೊರವಪ್ಪ ಹೊನ್ನಪ್ಪ ಬಿಲ್ಲರ ಅವರು’ ಮುತ್ತಿನ ರಾಶಿಗೆ ಮುತ್ತ ಕೊಟ್ಟಿತಲೇ ಪರಾಕ್​’ ಎಂದು ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿದರು.
ಹೂವಿನಹಡಗಲಿಯ ಮೈಲಾರದ ಡೆಂಕನಮರಡಿಯಲ್ಲಿ ಕಾರ್ಣಿಕ ನುಡಿಯುವ ಹಿಂದಿನ ದಿನ ಹಾವನೂರಿನಲ್ಲಿ ಕಾರ್ಣಿಕ ಹೇಳಲಾಗುತ್ತದೆ. ಇದನ್ನು ಭವಿಷ್ಯ ಎಂದೇ ಪರಿಗಣಿಸಲಾಗುತ್ತದೆ.
15-20 ಅಡಿ ಎತ್ತರದ ಬಿಲ್ಲನ್ನು ಏರಿದ ಗೊರವಪ್ಪ ಮುತ್ತಿನ ರಾಶಿಗೆ ಮುತ್ತ ಕೊಟ್ಟಿತಲೇ ಪರಾಕ್​’ ಎಂದು ಹೇಳಿದ್ದನ್ನು ಅನೇಕ ರೀತಿಯಲ್ಲಿ ಅರ್ಥೈಸಲಾಗಿದೆ.
ಈ ವರ್ಷ ರೈತರಿಗೆ ಹೆಚ್ಚು ಮಹತ್ವವನ್ನು ಕಾರ್ಣಿಕ ನೀಡಿದೆ ಎಂದು ಭಕ್ತರು ಹೇಳಿದ್ದಾರೆ. ಅಲ್ಲದೆ ರಾಜಕೀಯ ವಿಚಾರಕ್ಕೂ ಅದನ್ನು ಅನ್ವಯಿಸಿಕೊಂಡು ತಮ್ಮದೇ ಧಾಟಿಯಲ್ಲಿ ಅರ್ಥೈಸಿದ್ದಾರೆ.
ಕಾರ್ಣಿಕವನ್ನು ವೀಕ್ಷಿಸಲು ಹಾವನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಆಗಮಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 1 =
Remember me
