– ಗಡಿಯಾಚೆಗಿನ ಕನ್ನಡಿಗರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ: ಡಾ.ಸೋಮಶೇಖರ್
ಬೆಂಗಳೂರು:ಗಡಿಯಷ್ಟೆ ಅಲ್ಲ, ಗಡಿಯಾಚೆಗೂ ಇರುವ ಕನ್ನಡಿಗರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾಸಿ.ಸೋಮಶೇಖರ್ ಹೇಳಿದರು.
ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕನ್ನಡ ಸಂಘ ಕೊಚ್ಚಿನ್ ಮತ್ತು ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಏ 30 ರಂದು ಕೇರಳದ ಎರ್ನಾಕುಲಂ ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ “ಕೊಚ್ಚಿನ್ ಕನ್ನಡ ಸಂಸ್ಕ್ರತಿ ಉತ್ಸವ 2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರ ಗಡಿ ನಾಡಲ್ಲಿ ಕನ್ನಡದ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಲೇ ಬಂದಿದೆ ತಮ್ಮ ಅವಧಿಯಲ್ಲಿ 500 ಕನ್ನಡ ಸಂಘಟನೆಗಳಿಗೆ ತಲಾ ಒಂದು ಲಕ್ಷ ರೂ ಅನುದಾನ ನೀಡಿರುವುದಾಗಿ ಅವರು ತಿಳಿಸಿದರು.
ಗಡಿ ಭಾಗದಲ್ಲಿ ಮತ್ತು ಹೊರ ನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಕನ್ನಡ ಅಸ್ಮಿತೆಯನ್ನು ಕಾಪಾಡುವ ಕೆಲಸ ಮಾಡುತ್ತಲೇ ಬಂದಿದೆ ಎಂದರು.ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ತನ್ನ ಕೊನೆ ಉಸಿರು ಇರುವವರೆಗೂ ಶತಾಯುಷಿ ಸಾಹಿತಿ ಕಯ್ಯಾರ ಕಿಯ್ಯಾಣ್ಣ ರೈ ಹೋರಾಡಿದರು ಎಂದು ನೆನೆದರು.
ಬೆಂಕಿ ಬಿದ್ದಿದೆ ಮನೆಗೆ ಓ ಬನ್ನಿ ಸೋದರರೇ…ಬೇಗ ಬನ್ನಿ. ನುಡಿ ಕಾಯಿ ಕಾಯೇ… ಗುಡಿ ಕಾಯೇ ಎಂದು ಅವರ ಕವನದ ವಾಚಿಸಿ, ಕನ್ನಡ ಜಾಗೃತಿ ಮೂಡಿಸುವ ಆ ಮಹಾನುಭಾವರ ಹೆಸರಲ್ಲಿ ಗಡಿನಾಡ ಚೇತನ ಎಂದು ಮೂರು ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ಡಾ. ಸೋಮಶೇಖರ್ ನೀಡಿದರು.
ವಿಶ್ವ ಸಮ್ಮೇಳನವಾಗಲಿ :ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ,ಕೊಚ್ಚಿಯಲ್ಲಿ ಕನ್ನಡದ ಕಂಪನ್ನು ಹಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ಕನ್ನಡ ಭವನ ನಿರ್ಮಾಣ ಮೂಲಕ ಕನ್ನಡಿಗರ ಇರುವಿಕೆ ಗುರುತಿಸಲು ಮಾದರಿಯ ಹೆಜ್ಜೆ ಇಟ್ಟಿದ್ದೀರಿ ಎಂದು ಪ್ರಶಂಸಿಸಿದರು.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ಕನ್ನಡದ ಕಂಪನ್ನು ಈ ಭಾಗದಲ್ಲಿ ಹಬ್ಬಿಸುವ ಕೆಲಸವನ್ನು ಕನ್ನಡಾಭಿಮಾನಿಗಳಾದ ತಾವೆಲ್ಲ ಮಾಡಿದ್ದೀರಿ ಅದಕ್ಕಾಗಿ ಪತ್ರಕರ್ತರ ಸಂಘದಿಂದ ತಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ಇಲ್ಲಿ ಕನ್ನಡ ಸಂಘಕ್ಕಾಗಿ ದುಡಿದವರು ಇತರೆಡೆ ನೆಲೆಸಿದರೂ ಕನ್ನಡ ಕಾರ್ಯಕ್ರಮವಾದಾಗ ಇಲ್ಲಿ ಬಂದು ಪಾಳ್ಗೊಳ್ಳುವ ನಿಮ್ಮ ಕನ್ನಡಾಭಿಮಾನ ಶ್ಲಾಘನೀಯವಾದುದು ಎಂದರು.
ಎಂಬತ್ತರ ದಶಕದಲ್ಲಿ ಕರ್ನಾಟಕ ಸರ್ಕಾರದಿಂದ ನೀಡಿದ ಕೇವಲ 25 ಸಾವಿರ ರೂಪಾಯಿ ಅನುದಾನ ಪಡೆದು, ಕನ್ನಡಿಗೊಬ್ಬರು ಸ್ವಂತ ಮನೆಯನ್ನು ಅಡಮಾನ ಇಟ್ಟು ಬ್ಯಾಂಕಿನಲ್ಲಿ ಸಾಲ ಪಡೆದು ಕನ್ನಡ ಸಂಘದ ಭವನ ನಿರ್ಮಿಸಲು ಶ್ರಮಿಸಿದ್ದಕ್ಜಾಗಿ ಅಭಿನಂದಿಸುತ್ತೇನೆ. ಹಾಗೇನೆ ಇದರಲ್ಲಿ ಪ್ರಧಾನ ಪಾತ್ರ ವಹಿಸಿದ ಕೊಚ್ಚಿನ್ ಕನ್ನಡ ಸಂಘದ ಅಧ್ಯಕ್ಷ ಶ್ರೀನಿವಾಸರಾವ್. ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ಅನವಟ್ಟಿ ಅವರಿಗೆ ಮತ್ತು ವಿಶಾಲ ಹೃದಯವುಳ್ಳ ಸಮಸ್ತ ಕನ್ನಡ ಮನಸ್ಸುಗಳಿಗೆ ಕೋಟಿ ಕೋಟಿ ನಮನ ಎಂದರು.
ಇದನ್ನೂ ಓದಿ:BJP Manifesto: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ಯಲ್ಲಿ ಏನಿದೆ?
ಗಡಿ ಅಭಿವೃದ್ದಿ ಪ್ರಾಧಿಕಾರ ಗಡಿಗೆ ಮಾತ್ರ ಸೀಮಿತವಾಗದೆ ಅದರ ಆಚೆಗಿರುವ ಕೊಚ್ಚಿಯಂತಹ ಕನ್ನಡ ಸಂಸ್ಥೆಗಳಿಗೆ ಭರವಸೆ ನೀಡಿದ ಹಾಗೆ ಜೊತೆಯಲ್ಲಿ ರಾಜ್ಯಾದ್ಯಂತ ಇರುವ ಇರುವ ಕನ್ನಡಿಗರನ್ನು ಒಂದೇ ಸೂರಿನಡಿಯಲ್ಲಿ ಪ್ರತಿ ವರ್ಷ ಸೇರಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ವಿಶ್ವ ಕನ್ನಡ ಸಮ್ಮೇಳನವನ್ನು ಮತ್ತೆ ಪ್ರಾರಂಭಿಸುವ ಕೆಲಸ ಕರ್ನಾಟಕ ಸರಕಾರ ಮಾಡಬೇಕು ಅದಕ್ಕಾಗಿ ರಾಜ್ಯ ಪತ್ರಕರ್ತರ ಸಂಘವು ಬೆಂಬಲವಾಗಿರಲಿದೆ ಎಂದರು.
ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕನ್ನಡ ಕೊಚ್ಚಿನ್ ಸಂಘದ ಅಧ್ಯಕ್ಷ ಶ್ರೀನಿವಾಸರಾವ್, ಧಾರ್ಮಿಕ ಮುಖಂಡ ಅರಿಬೈಲು ಗೋಪಾಲ ಶೆಟ್ಟಿ, ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಲೋಕೇಶ ಖಜಾಂಚಿ ವಾಸುದೇವ ಹೊಳ್ಳ ಮತ್ತಿತರರು ಹಾಜರಿದ್ದರು .
ಶೋಭಾಯಾತ್ರೆ ಮೆರವಣಿಗೆ ಕಾರ್ಯಕ್ರಮಕ್ಕೆ ಮುನ್ನ ಕೇರಳ ಕನ್ನಡಿಗರ ಶೋಭಾಯಾತ್ರೆ ಆಕರ್ಷಣೀಯವಾಗಿ ನಡೆಯಿತು.
ದೇಶ ಉದ್ಧಾರ ಮಾಡುವ ಕಾರ್ಯಕ್ರಮ ಬಿಜೆಪಿ ಬಳಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
