ಧಾರವಾಡ: ಪಾಕ್​ ಪರ ಘೋಷಣೆ ಕೂಗಿ ದೇಶದ್ರೋಹ ಆರೋಪದಲ್ಲಿ ಬಂಧಿತರಾಗಿರುವ ಕಾಶ್ಮೀರಿ ಯುವಕರ ಬಿಡುಗಡೆಗೆ ಜಾಮೀನು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ವಕೀಲರು ಹಿಂದಿರುಗಿದ್ದಾರೆ.
ಪೊಲೀಸರ ಭದ್ರತೆಯಲ್ಲಿ ಜಿಲ್ಲಾ ಕೋರ್ಟ್​ಗೆ ಆಗಮಿಸಿದ ಕಾಶ್ಮೀರಿ ಯುವಕರ ಪರ ವಕೀಲರು ಕೋರ್ಟ್​ ಆಡಳಿತಾಧಿಕಾರಿಗೆ ಜಾಮೀನು ಅರ್ಜಿ ಸಲ್ಲಿಸದೆ ನೇರವಾಗಿ ನ್ಯಾಯಾಧೀಶರಿಗೆ ಸಲ್ಲಿಸಲು ಮುಂದಾದರು. ಹೀಗಾಗಿ ನ್ಯಾಯಾಧೀಶರು ಅರ್ಜಿ ಸ್ವೀಕರಿಸಲು ನಿರಾಕರಿಸಿ. ಆಡಳಿತಾಧಿಕಾರಿಗೆ ಸಲ್ಲಿಸಿ ಎಂದು ಸೂಚಿಸಿದರು.
ಜಾಮೀನು ಅರ್ಜಿ ಹಿಂದಕ್ಕೆ ಪಡೆದ ವಕೀಲರು ಆಡಳಿತಾಧಿಕಾರಿಗೆ ಅರ್ಜಿ ಸಲ್ಲಿಸದೆ ಕೋರ್ಟ್​ನಿಂದ ಹೊರ ನಡೆದರು.
ವಕೀಲರ ಕಾರು ಜಖಂ: ಕಾಶ್ಮೀರಿ ಯುವಕರ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲು ಬೇರೆ ಕಡೆಯಿಂದ ಬಂದ ವಕೀಲರನ್ನು ಸ್ಥಳೀಯ ವಕೀಲರು ತೀವ್ರವಾಗಿ ವಿರೋಧಿಸಿದರು. ಇದರಿಂದ ಕೋರ್ಟ್​ ಆವರಣದಲ್ಲಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಯಿತು. ಗುಂಪು ವಕೀಲರ ಕಾರು ಜಖಂಗೊಳಿಸಿತು. ಪೊಲೀಸರು ಮಧ್ಯ ಪ್ರವೇಶಿಸಿ ವಕೀಲರನ್ನು ಸುರಕ್ಷಿತವಾಗಿ ಕೋರ್ಟ್​ ಆವರಣದಿಂದ ಹೊರಕ್ಕೆ ಕಳುಹಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
