ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕವಲೆದುರ್ಗದ ಮಹಾಮಹತ್ತಿನ ಭುವನಗಿರಿ ಸಂಸ್ಥಾನಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಲಿಂಗೈಕ್ಯರಾದರು. ಸ್ವಾಮೀಜಿ ಕೆಲವು ದಿನಗಳ ಹಿಂದೆ ಕರೊನಾ ಸೋಂಕಿಗೆ ಒಳಗಾಗಿದ್ದರು.
ಕರೊನಾ ಸೋಂಕಿತರಾಗಿದ್ದ ಸ್ವಾಮೀಜಿಯವರನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಹಿಂದೆ ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಲಿಂಗೈಕ್ಯರಾದರು.
ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್​ಡಿ ಪದವಿ ಪಡೆದಿದ್ದರು. ಜೊತೆಗೆ ತಮ್ಮ ಮಠದಲ್ಲಿ ಯಾವುದೇ ಸೇವಕರನ್ನು ಇಟ್ಟುಕೊಳ್ಳದೆ ಮಠದ ಎಲ್ಲ ಕೆಲಸವನ್ನು ತಾವೇ ಮಾಡುತ್ತಿದ್ದರು. ಅಲ್ಲದೆ ಮಠಕ್ಕೆ ಆಗಮಿಸುವ ಭಕ್ತರಿಗೆ ತಾವೇ ಅಡುಗೆ ಮಾಡಿ ದಾಸೋಹ ಮಾಡುತ್ತಿದ್ದರು.
ರಾಜ್ಯದಲ್ಲಿ ಇಳಿಯುತ್ತಿದ್ದ ಸೋಂಕು ಮತ್ತೆ ಏರಿತು!; ಆತಂಕ ಹುಟ್ಟಿಸಿದ ಪಾಸಿಟಿವಿಟಿ ರೇಟ್…

ಕೊವ್ಯಾಕ್ಸಿನ್‌ಗಿಂತ ಕೋವಿಶೀಲ್ಡ್ ಲಸಿಕೆ ಬೆಸ್ಟ್ ಅಂತೆ!; ಯಾಕೆ ಅಂತ ಹೇಳುತ್ತೆ ಈ ಅಧ್ಯಯನ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
