ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಸಂಸದರ ಸಭೆ ನಡೆದಿದೆ.
ಮಂಗಳವಾರ ತಡ ರಾತ್ರಿ ದೆಹಲಿಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕಾವೇರಿ ವಿಷಯದಲ್ಲಿ ತಮಿಳುನಾಡು ಸರ್ಕಾರ ಅನುಸರಿಸುತ್ತಿರುವ ಒತ್ತಡ ತಂತ್ರ ಮತ್ತು ಕೇಂದ್ರ ಸರ್ಕಾರ ಯಾವ ರೀತಿ ನೆರವಾಗಬಹುದೆಂಬುದು ಚರ್ಚೆಯ ಸಾರವಾಗಿತ್ತು.
ಬುಧವಾರ ಬೆಳಗ್ಗೆ ರಾಜ್ಯದ ಸಂಸದರೊಂದಿಗೆ ಸಿಎಂ ಹಾಗೂ ಡಿಸಿಎಂ ಉಪಾಹಾರ ಕೂಟದಲ್ಲಿ ಪಾಲ್ಗೊಂಡು ಎಲ್ಲರೂ ಒಟ್ಟಾಗಿ ಒತ್ತಡ ತರುವ ಬಗ್ಗೆ ಸಮಾಲೋಚನೆ ನಡೆಸಿದರು. ಬಳಿಕ ನಡೆದ ಸಭೆಯಲ್ಲಿ ಸಿಎಂ, ಕಾವೇರಿ ವಸ್ತು ಸ್ಥಿತಿ ಮತ್ತು ಕರ್ನಾಟಕದ ಅವಶ್ಯಕತೆಯನ್ನು ಸಭೆಯ ಗಮನಕ್ಕೆ ತಂದರು. ಕೇಂದ್ರ ಸಚಿವ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬ ಸೇರಿ ಸಚಿವ, ಸಂಸದರು ಹಾಜರಿದ್ದು, ಅಭಿಪ್ರಾಯ ತಿಳಿಸಿದರು.
ಕೇಂದ್ರ ಜಲಶಕ್ತಿ ಸಚಿವರನ್ನು ರಾಜ್ಯದ ನಿಯೋಗ ಭೇಟಿಯಾಗಲಿದೆ. ಅದೇ ರೀತಿ ಪ್ರಧಾನಿ ಭೇಟಿಗೂ ಪ್ರಯತ್ನ ನಡೆಸಲಾಗಿದೆ. ರಾಜ್ಯದ ವಸ್ತುಸ್ಥಿತಿ ಅರಿಯಲು ಅಧಿಕಾರಿಗಳು, ತಜ್ಞರ ತಂಡವನ್ನು ಕಳಿಸುವ ಕುರಿತಂತೆಯೂ ಪ್ರಯತ್ನ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
