ಬೆಂಗಳೂರು:ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿಯಲ್ಲಿರುವ 50 ಸಹಾಯಕ ಇಂಜಿನಿಯರ್ (ಸಿವಿಲ್) ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ.
ಮೂಲ ವೃಂದದಲ್ಲಿ 54 ಮತ್ತು ಕಲ್ಯಾಣ ಕರ್ನಾಟಕದಲ್ಲಿ 10 ಮೀಸಲಾತಿ ಹುದ್ದೆಗಳು ದೊರೆಯಲಿವೆ. ೆ.10ರಿಂದ ಮಾರ್ಚ್ 10ರ ವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮಾ.14 ಕೊನೆಯ ದಿನವಾಗಿದೆ.
ಸಾಮಾನ್ಯ ಮತ್ತು ಇತರೆ ಪ್ರವರ್ಗಗಳಿಗೆ 750 ರೂ. ಮತ್ತು ಪರಿಶಿಸ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಸಹಾಯಕ ಇಂಜಿನಿಯರ್ ಹುದ್ದೆಗೆ ಬಿಇ/ಬಿ.ಟೆಕ್ ವಿದ್ಯಾರ್ಹತೆ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಬಿ.ಕಾಂ ಪದವಿ ಪಡೆದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ಮತ್ತು ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಠಿಠಿ://ಛಿ.ಚ್ಟ.್ಞಜ್ಚಿ.ಜ್ಞಿ ಭೇಟಿ ನೀಡಬಹುದು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − five =
Remember me
