ಬೆಂಗಳೂರು: ರಾಜ್ಯದಲ್ಲಿ ಕೋವಿಡ್​-19 ಕಾಯಿಲೆ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಅಂತೆಯೇ ಕರ್ನಾಟಕ ವಸತಿ ಸಂಘ-ಸಂಸ್ಥೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಮಾರ್ಚ್​ 23ರಂದು ಸುತ್ತೋಲೆ ಹೊರಡಿಸಲಾಗಿತ್ತು. ಇದೀಗ, ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಿವಿಧ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಮೇ 6 ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಅರ್ಜಿ ಸಲ್ಲಿಕೆ ಹಾಗೂ ಪ್ರವೇಶ ಪರೀಕ್ಷೆಯ ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಪ್ರಾಧಿಕಾರ ಹೇಳಿದೆ. ಅಭ್ಯರ್ಥಿಗಳು ವಿವರಗಳಿಗಾಗಿ kea.kar.nic.in ಗಮನಿಸುತ್ತ ಇರಬೇಕೆಂದು ಕೋರಲಾಗಿದೆ.
ದೇಶಾದ್ಯಂತ ಲಾಕ್​ಡೌನ್​ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಂತಾಗಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶಾಲೆಗಳಿಗೆ ಬೇಸಿಗೆ ರಜೆ ನೀಡಿದ್ದರೆ, ಕಾಲೇಜುಗಳಿಗೆ ಏಪ್ರಿಲ್​ 14ರವರೆಗೆ ರಜೆ ಘೋಷಿಸಲಾಗಿದೆಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಶಿಕ್ಷಕರಿಗೆ ಏಪ್ರಿಲ್​ 14ರವರೆಗೆ ಮಾತ್ರ ರಜೆ; ಮೇ 20ರವರೆಗೆ ಅಲ್ಲ: ಕಾಲೇಜು ಶಿಕ್ಷಣ ಆಯುಕ್ತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 11 =
Remember me
