ಬೆಂಗಳೂರು:ಕೆಜಿಎಫ್ ತಾತ ಖ್ಯಾತಿಯ ಕೃಷ್ಣೋಜಿರಾವ್(70) ಬುಧವಾರ ನಿಧನರಾದರು.
ನ.31ರ ತಡರಾತ್ರಿ ಮನೆಯಲ್ಲಿ ಸುಸ್ತಾಗಿ ಬಿದ್ದ ಕೃಷ್ಣೋಜಿರಾವ್​ ಅವರನ್ನು ಕುಟುಂಬಸ್ಥರು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಿಸಿದ್ದರು. ಲಂಗ್ಸ್​ಗೆ ಸೋಂಕು ತಗುಲಿದ್ದರಿಂದ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನುರಿತ ವೈದ್ಯರ ತಂಡ ಒಂದು ವಾರದಿಂದ ಚಿಕಿತ್ಸೆ ನೀಡಿತ್ತಾದರೂ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಕೆಜಿಎಫ್ ಸಿನಿಮಾದಲ್ಲಿ ತಾತನ ಪಾತ್ರದಲ್ಲಿ ಬಣ್ಣ ಹಚ್ಚಿದ್ದ ಕೃಷ್ಣೋಜಿರಾವ್​ ಅವರು ಕೆಜಿಎಫ್​ ತಾತ ಎಂದೇ ಖ್ಯಾತಿ ಪಡೆದರು. ನಂತರ ಸಾಕಷ್ಟು ಸಿನಿಮಾಗಳು ಇವರನ್ನು ಅರಸಿಕೊಂಡು ಬಂದವು. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಹೀರೋ ಆಗಿ ಮಿಂಚಿದ್ದರು. ಈ ಸಿನಿಮಾದಲ್ಲಿ ಕೌಬಾಯ್ ಗೆಟಪ್​ನಲ್ಲಿ ಕಾಣಿಸಿಕೊಂಡ ಕೃಷ್ಣೋಜಿರಾವ್​, 70ನೇ ವಯಸ್ಸಲ್ಲಿ ಹೀರೋ ಆಗುವ ಕನಸನ್ನೂ ಈಡೇರಿಸಿಕೊಂಡಿದ್ದರು.
ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
