ಮಂಗಳೂರು:ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಬಾಲಕನನ್ನು ರಕ್ಷಣೆ ಮಾಡಲಾಗಿದ್ದು, ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಸೈನಿಕ ಶಿವನ್​ ಪುತ್ರ ಬಿಜೋಯ್ ಎಂಬುವರ 8 ವರ್ಷದ ಮಗ ಅನುಭವ್​ನನ್ನು ಅಪಹರಿಸಲಾಗಿತ್ತು. ಮಾಜಿ ಸೈನಿಕ ಶಿವನ್ ಓರ್ವ ದೊಡ್ಡ ಉದ್ಯಮಿ. ಗುರುವಾರ ಸಂಜೆ 6.30ರ ಸುಮಾರಿಗೆ ಅನುಭವ್​ನನ್ನು ಹಳದಿ ಪ್ಲೇಟ್ ನಂಬರ್​ನ ಇಂಡಿಕಾ ಕಾರ್​ನಲ್ಲಿ ಅಪಹರಿಸಲಾಗಿತ್ತು. ಬಿಜೋಯ್ ಹಾರ್ಡ್​ವೇರ್ ವ್ಯವಹಾರಸ್ಥರಾಗಿದ್ದಾರೆ. ನಿನ್ನೆ ಬಿಜೋಯ್ ಪತ್ನಿ ಸರಿಯಾ ಬಿಜೋಯ್ ಗೆ ಕರೆ ಮಾಡಿ 17 ಕೋಟಿ ರೂಪಾಯಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ:ಜನವರೀಲಿ ರೇಷನ್​ಕಾರ್ಡ್​ಗೆ ಅರ್ಜಿ?
ಪ್ರಕರಣ ದಾಖಲಾಗುತ್ತಿದ್ದಂತೆ ತೀವ್ರ ಕಾರ್ಯಾಚರಣೆ ನಡೆಸಿದ ವಿಶೇಷ ಪೊಲೀಸ್​ ತಂಡ ಕೋಲಾರದ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂರ್ನಹೊಸಳ್ಳಿ ಗ್ರಾಮದಲ್ಲಿ ಆರೋಪಿಗಳನ್ನು ಖೆಡ್ಡಾಗೆ ಕೆಡವಿದ್ದಾರೆ. ಸದ್ಯ ಆರೋಪಿಗಳನ್ನು ಮಾಸ್ತಿ ಠಾಣೆಯಲ್ಲಿ ಬಂಧಿಸಿಡಲಾಗಿದೆ.
ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯೊಂದರಲ್ಲಿ ಮಗುವನ್ನು ಇರಿಸಿದ್ದರು. ಕೋಲಾರ ಪೊಲೀಸ್​ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಅಪಹರಣಕಾರರನ್ನು ಬಂಧಿಸಿದೆ. ಮಂಡ್ಯ ಮೂಲದ ಗಂಗಾಧರ್ ಹಾಗೂ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಕೋಮಲ್ ಸೇರಿ ಒಟ್ಟು ನಾಲ್ಕು ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಕೇಂದ್ರದ ವಿರುದ್ಧ ದೀದಿ ಕಾನೂನು ಹೋರಾಟ
ಅಪಹರಣಕಾರರಿಗೆ ಸಹಕಾರ ನೀಡಿದ್ದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಹಾಗೂ ಮಹೇಶ್ ಸಹ ‌ಬಂಧನವಾಗಿದ್ದಾರೆ. ಕಿಡ್ನ್ಯಾಪ್​ ಮಾಡಿದ ತಂಡದ ಕೋಮಲ್ ಹಾಗೂ ಮಹೇಶ್ ಸ್ನೇಹಿತರು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಟ್ಯಾಂಕರ್ ಡ್ರೈವರ್ ಆಗಿದ್ದ ಮಹೇಶ್​ಗೆ ಕೋಮಲ್ ‌ಪರಿಚಯ. ಕಳೆದ‌ ರಾತ್ರಿಯಷ್ಟೇ‌ ಕೋಲಾರದ ಕೂರ್ನಹೊಸಳ್ಳಿ ಗ್ರಾಮಕ್ಕೆ ಮಗುವಿನೊಂದಿಗೆ ಬಂದಿದ್ದರು. ಈ ವೇಳೆ ಮಂಜುನಾಥ್ ಎಂಬುವರ‌ ಮೊಬೈಲ್ ಬಳಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!

ಚಳಿಗೆ ಬ್ರಾಯ್ಲರ್ ಕೋಳಿ ಸೂಕ್ತ

ಕರುವನ್ನು ದತ್ತುಪಡೆದು ಮುಂಡನ ಕಾರ್ಯ ಈಡೇರಿಸಿ ನಾಮಕರಣ ಮಾಡಿದ ದಂಪತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × two =
Remember me
