ಮೈಸೂರು:ಮೈಸೂರಿನಲ್ಲೊಂದು ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದ್ದು ಕಿಡ್ನ್ಯಾಪ್​ ಮಾಡಿದ್ದವರು ದೇವರಿಗೂ ಪೀಕಿದ ಹಣದಲ್ಲಿ ಪಾಲು ನೀಡಿದ್ದಾರಂತೆ!
ಈ ಖತರ್ನಾಕ್​ ಗ್ಯಾಂಗ್​ನವರು, ದೇವರಿಗೇ ಲಂಚ ಕೊಟ್ಟಿದ್ದಾರೆ. ಇವರು ತಂದೆ-ಮಗು ಕಿಡ್ನಾಪ್ ಪ್ರಕರಣದಲ್ಲಿ ಬಂಧಿತರಾದಾಗ ವಿಚಾರ ಬೆಳಕಿಗೆ ಬಂದಿದೆ.
ಈ ಕಿಡ್ನ್ಯಾಪ್​ ಪ್ರಕರಣ ನಂಜನಗೂಡಿನಲ್ಲಿ ಫೆ.6ರಂದು ನಡೆದಿತ್ತು. ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಹರ್ಷ ಇಂಪೆಕ್ಸ್ ಫ್ಯಾಕ್ಟರಿ ಮಾಲೀಕ ದೀಪಕ್ ಹಾಗೂ ಅವರ ಪುತ್ರ ಹರ್ಷನನ್ನು ಈ ಗ್ಯಾಂಗ್​ ಅಪಹರಿಸಿತ್ತು. ಉದ್ಯಮಿ ಮೊಬೈಲ್ ಫೋನ್‌ನಿಂದಲೇ ಕುಟುಂಬಸ್ಥರಿಗೆ ಕಾಲ್ ಮಾಡಿದ್ದ ಆರೋಪಿಗಳು 1 ಕೋಟಿ ರೂ.ಗೆ ಡಿಮಾಂಡ್ ಮಾಡಿದ್ದರು.
ಈ ಸಂದರ್ಭ ಆರೋಪಿಗಳು 35 ಲಕ್ಷ ರೂ. ವಸೂಲಿ ಮಾಡಿದ್ದರು. ನಂತರ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂದರ್ಭ ತ್ವರಿತವಾಗಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಮೂರು ತಂಡ ರಚಿಸಿ ಪ್ರಕರಣ ಭೇದಿಸಿದ್ದರು. ಕಾರ್ಯಾಚರಣೆ ವೇಳೆ 10 ಆರೋಪಿಗಳ ಬಂಧಿಸಲಾಗಿದೆ.
ಮಂಡ್ಯ ಮೂಲದ ಆರೋಪಿ ನಂ1, ಕೊಲೆ ಪ್ರಕರಣದಲ್ಲಿ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಈತ ತನ್ನ ಸ್ನೇಹಿತರ ಟೀಮ್ ಮಾಡಿಕೊಂಡು ಕಿಡ್ನಾಪ್ ಮಾಡಿ ಮತ್ತೆ ಜೈಲು ಪಾಲಾಗಿದ್ದಾನೆ. ಪ್ರಕರಣಕ್ಕೆ ಬಳಸಿದ್ದ ಕಾರು, ಮೂರು ದ್ವಿಚಕ್ರ ವಾಹನ, 5 ಡ್ರಾಗರ್, 3 ಲಾಂಗ್, 11 ಮೊಬೈಲ್ ಫೋನ್​ಅನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. 21 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ತನಿಖೆ ವೇಳೆ ಈ ಆರೋಪಿಗಳು, ಅನೇಕ ದೇವಾಯಲಯಗಳ ಹುಂಡಿಗೆ 50-40 ಸಾವಿರ ರೂ. ಹಣವನ್ನು ಹಾಕಿರುವುದಾಗಿ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಪ್ರಕರಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 9 =
Remember me
