ಬೆಂಗಳೂರು:ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್​ಬಾಸ್​ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ನಾಡು, ದೇಶ, ಧರ್ಮ, ಭಾಷೆ, ಸಿದ್ಧಾಂತಗಳ ವಿಚಾರದಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ್ದ ಬೆನ್ನಿಗೇ ಅವರು ಇದೀಗ ವೈವಾಹಿಕ ಬದುಕಿನ ಕುರಿತ ನಿರ್ಣಯವನ್ನೂ ಪ್ರಕಟಿಸಿದ್ದಾರೆ. ನಾಡು, ನುಡಿ, ದೇಶ, ಧರ್ಮದ ಕುರಿತು ಮಾತನಾಡಿದ್ದಕ್ಕೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದಲ್ಲದೆ ತೇಜೋವಧೆಗಳಾಗಿದ್ದರ ಬಗ್ಗೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದರು.
ತನ್ನನ್ನು ಸೈದ್ಧಾಂತಿಕವಾಗಿ, ವೈಚಾರಿಕವಾಗಿ ವಿರೋಧಿಸುವವರು ತನ್ನ ಕುಟುಂಬಸ್ಥರನ್ನು ಉದ್ದೇಶಿಸಿ ಅವಹೇಳನಕಾರಿ ಆಗಿ ಮಾತನಾಡುತ್ತಿದ್ದುದರ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನನ್ನ ಕುಟುಂಬಸ್ಥರ ಹಿತದ ದೃಷ್ಟಿಯಿಂದ ಇನ್ನು ನನ್ನ ಸಿದ್ಧಾಂತ, ನಾಡು-ನುಡಿ, ದೇಶ-ಧರ್ಮದ ಮೇಲಿನ ಅಭಿಮಾನ ಮನಸ್ಸಿನಲ್ಲಿ ಮಾತ್ರ ಇರಲಿದೆ, ಆ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂಬ ನಿರ್ಧಾರ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಇಂದು ವಿಚ್ಛೇದನ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಕಿರಿಕ್ ಕೀರ್ತಿ ತಮ್ಮ ವಿಚ್ಛೇದನವನ್ನು ಪ್ರಕಟಿಸಿದ್ದಾರೆ.

ಹೃದಯಾಘಾತದಿಂದ ಸಾವು: ಪುರುಷರಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ ಆತಂಕಕಾರಿ ಮಾಹಿತಿ!

ಸದ್ಯ ಈ ಬಿಯರ್ ಕುಡಿಯಬೇಡಿ!; ಸೆಡಿಮೆಂಟ್ ಶೇಖರಣೆ ಆಗಿರುವುದರಿಂದ ತಡೆ ಹಿಡಿದ ಅಬಕಾರಿ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + one =
Remember me
