ಕಲಬುರಗಿ:ಪಿಎಸ್​​ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ‌ ಮಗದೊಂದು ಪರೀಕ್ಷೆಯ ಗೋಲ್ಮಾಲ್​ ಬೆಳಕಿಗೆ ಬಂದಿದೆ. ಕೆಕೆಆರ್​ಟಿಸಿ ಡ್ರೈವರ್​ ಕಂ ಕಂಡಕ್ಟರ್​ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್​ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್‌ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ.(ದಿಗ್ವಿಜಯ ನ್ಯೂಸ್​)
ಪ್ರೇಯಸಿಯ ಪಾಲಕರು, ಕಾಡುಗೋಡಿ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ವಿಷ ಕುಡಿದ ಯುವಕ

ಸಂಸತ್ತಿನಲ್ಲಿ ಪಠಾಣ್​ ಸಿನಿಮಾ ಯಶಸ್ಸನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ! ಶಾರುಖ್​ ಅಭಿಮಾನಿಗಳ ಸಂಭ್ರಮ

ಪಠಾಣ್​ ಸಿನಿಮಾ ಇಷ್ಟ ಆಗಲಿಲ್ಲ ಎಂದ ಮಗುವಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ವೈರಲ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
