ಬೆಂಗಳೂರು:ಪ್ರತಿ ಲೀಟರ್ ಹಾಲಿನ ಮೇಲೆ 3 ರೂಪಾಯಿ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್​) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕೆಎಂಎಫ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಅಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹಾಲಿನ ದರ ಏರಿಸುವಂತೆ ಮನವರಿಕೆ ಮಾಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದಾರೆ. ಕೆಎಂಎಫ್ ಶಿಫಾರಸ್ಸಿಗೆ ಒಪ್ಪಿಗೆ ಮೂಲಕ ಸರ್ಕಾರ ಕೊಡುವ 3 ರೂ.ಅನ್ನು ರೈತರಿಗೆ ನೀಡಲು ಕೆಎಂಎಫ್​ ನಿರ್ಧರಿಸಿದೆ.
ಖಾಸಗಿ ಬ್ರಾಂಡ್‌ಗಳ (ಉತ್ಪನ್ನಗಳಿಗೆ) ಮಾರಾಟಕ್ಕೆ ಹೋಲಿಕೆ ಮಾಡಿದಾಗ ನಾವು ತೆಗೆದುಕೊಳ್ಳುವ ಬೆಲೆ 5-7 ರೂ. ಕಡಿಮೆ ಇದೆ. ಪ್ರತಿ ಲೀ. ಹಾಲನ್ನು 37 ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಹಾಗಾಗಿ, ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಮುಂಬೈನಲ್ಲಿ ಪ್ರತಿ ನಿತ್ಯ 2 ಲಕ್ಷ ಲೀ. ಹಾಲು ಮಾರಾಟ ಮಾಡುತ್ತಿದ್ದೇವೆ. ಕಲ್ಕತ್ತಾ ಸೇರಿ ಉತ್ತರ ಭಾರತದ ರಾಜ್ಯಗಳಲ್ಲಿ ಹಾಲು ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ.
ಗೋವಾ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಅಂದಾಜು 5 ಲಕ್ಷ ಲೀ. ಹಾಲು ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಮಾಹಿತಿ ನೀಡಿದರು.
ಮಳೆ ಹಾನಿ ಪರಿಶೀಲನೆಗೆ ಹೋಗಿ ಹೊಳೆ ನಡುವೆ ಸಿಲುಕಿದ ಅಧಿಕಾರಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
