ಬೆಳಗಾವಿ:ತಮ್ಮ ಭವಿಷ್ಯವಾಣಿಯಿಂದಲೇ ಹೆಚ್ಚು ಸುದ್ದಿಯಲ್ಲಿರುವ ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದು, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಶ್ರೀಗಳು ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತದೆ. ವಿಷಾನಿಲ ಬೀಸುವ ಪ್ರಸಂಗವೂ ಇದೆ ಮತ್ತು ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು.
ಇದನ್ನೂ ಓದಿ:ಕಸ್ಟಡಿ ಡೆತ್ ಕೇಸ್ ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು : ಹಸ್ತಾಂತರ ಬೆನ್ನಲ್ಲಿಯೇ ಜಾಲಾಡಿ ಮಾಹಿತಿ ಸಂಗ್ರಹ ಶುರು
ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ. ಇಲ್ಲಿ ಯಾವುದೇ ತೊಂದರೆಯಿಲ್ಲ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಾಗಲಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟಗಳು ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ಹೇಳಿದರು.
ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ. ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು ಮತ್ತು ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ. ಅದು ಪ್ರಕೃತಿಯ ನಿಯಮ ಎಂದು ಹೇಳಿದರು.
ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ. ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ. ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು. ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ. ಹೀಗಾಗಿ ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ. ಆದರೆ, ಮನುಷ್ಯ ಭಗವಂತನನ್ನು ಮರೆತಿದ್ದಾನೆ. ದೈವ ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗ್ತಿವೆ ಎಂದರು.
ಇದನ್ನೂ ಓದಿ:ವಿಶ್ವದರ್ಜೆಯ ಪೊಲೀಸಿಂಗ್ ವ್ಯವಸ್ಥೆಗೆ ಪಣ: ಬಾಡಿಗೆದಾರರ ಡೇಟಾ ಸಂಗ್ರಹಕ್ಕೆ ವಿಶೇಷ ಆ್ಯಪ್​, ಡ್ರಗ್ಸ್ ದಂಧೆ ತಡೆಯಲು ಹೊಸ ಯೋಜನೆ ಜಾರಿ
ರಾಜ್ಯ ರಾಜಕಾರಣ ಕುರಿತು ಪ್ರತಿಕ್ರಿಯಿಸಿದ ಕೋಡಿ ಶ್ರೀಗಳು, ರಾಜಕಾರಣದ ಬಗ್ಗೆ ಏನೂ ಹೇಳಲ್ಲ, ಆದರೆ ಸರ್ಕಾರಕ್ಕೆ‌ ತೊಂದರೆಯಿಲ್ಲ. ಪಕ್ಷಾಂತರ ಬಗ್ಗೆಯೂ‌ ಚುನಾವಣೆ ಪೂರ್ವವೇ ಹೇಳಿದ್ದೆ. ರಾಜಕೀಯ ಅಲ್ಲೋಲ, ಕಲ್ಲೋಲ ಆಗಲಿದೆ ಎಂದು ಹೇಳಿದ್ದೆ. ಈಗ ಅಸ್ಥಿರತೆ ಉಂಟಾಗುತ್ತಿದೆ ಎಂದರು. ಈ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಇವರದ್ದು ಮುಗಿಲಿ, ಎಲ್ಲವನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ. ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.(ದಿಗ್ವಿಜಯ ನ್ಯೂಸ್​)
ಡಿ. 22ಕ್ಕೆ ಸೈಂಧವ ; ವಿಕ್ಟರಿ ವೆಂಕಟೇಶ್​, ಶ್ರದ್ಧಾ ಶ್ರೀನಾಥ್​ ನಟಿಸಿರುವ ಪ್ಯಾನ್​ ಇಂಡಿಯಾ ಚಿತ್ರ

ಚಲಿಸುತ್ತಿರುವ ಬಸ್​ನಿಂದ ಕಳಚಿಬಿದ್ದ ಟೈಯರ್! ಗದಗಿನಲ್ಲಿ ನಡೆದ ಘಟನೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ​

ಲ್ಯಾಂಡರ್​​ ವೇಗ ತಗ್ಗಿಸುವ ಕೊನೇ ಹಂತದ ಪ್ರಕ್ರಿಯೆ ಸಕ್ಸಸ್​: ಚಂದ್ರಯಾನ 3 ನೌಕೆಯ ಮುಂದಿನ ನಿಲ್ದಾಣ ಚಂದ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
