ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಭಾಷೆ ಸ್ಥಾನವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೂ ಆ್ಯಪ್ ಅವರ ಪ್ರಯತ್ನ ಶ್ಲಾಘನೀಯವಾಗಿದ್ದು, ಇಂಥ ಪ್ರಯತ್ನ ಹೆಚ್ಚಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೂ ಆ್ಯಪ್ ವತಿಯಿಂದ ವರ್ಚುವಲ್ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭಾನುವಾರ ಸಾಂಕೇತಿಕವಾಗಿ ಉದ್ಘಾಟಿಸಿ ಬಳಿಕ ಮಾತನಾಡಿದರು. ಟ್ವಿಟರ್ ಮಾದರಿಯಲ್ಲಿ ಕೂ ಆ್ಯಪ್ ಅಭಿವೃದ್ಧಿ ಪಡಿಸಿದ್ದಾರೆ. ಕನ್ನಡದಲ್ಲಿಯೇ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಲ್ಲಿ ಈ ಆ್ಯಪ್ ಅನ್ನು ತಯಾರಿಸಿದ್ದಾರೆ. ಕನ್ನಡದವರೇ ಆದ ಅಪ್ರಮೇಯ ಅವರು ಈ ಪ್ರಯತ್ನ ನಡೆಸಿರುವುದು ಹೆಮ್ಮೆಯ ವಿಚಾರ. ಅಷ್ಟೆ ಅಲ್ಲದೆ, ಇತ್ತೀಚೆಗೆ ಪ್ರಧಾನಿ ಅವರು ಆತ್ಮ ನಿರ್ಭಾರ ಸ್ಪರ್ಧೆ ಆಯೋಜಿಸಿ ದೇಶಾದ್ಯಂತ ಈ ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ಕೂ ಆ್ಯಪ್ ಮೊದಲ ಸ್ಥಾನ ಪಡೆದಿರುವುದು ರಾಜ್ಯದ ಕೀರ್ತಿ ಹೆಚ್ಚಿಸಿದಂತಾಗಿದೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಭಾಷೆಯನ್ನು ಬೆಳೆಸುವ ಅನಿವಾರ್ಯತೆ ಇದೆ ಎಂದ ಸಿಎಂ ಯಡಿಯೂರಪ್ಪ, ಕೂ ಆ್ಯಪ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಪ್ರತಿಯೊಬ್ಬ ಕನ್ನಡಿಗರೂ ಈ ಆ್ಯಪ್ ಬಳಸುವ ಮೂಲಕ ಕನ್ನಡವನ್ನು ಬೆಳೆಸಲಿ ಎಂದು ಶುಭ ಕೋರಿದರು.
ಕೂ ಆ್ಯಪ್‌ನ ಸಿಇಒ ಅಪ್ರಮೇಯ ರಾಧಾಕೃಷ್ಣ ಮಾತನಾಡಿ, ಕೂ ಆ್ಯಪ್‌ ಅನ್ನು ಲಕ್ಷಾಂತರ ಮಂದಿ ಬಳಸುತ್ತಿದ್ದಾರೆ. ಎಲ್ಲ ಕ್ಷೇತ್ರದ ಜನರೂ ಈ ಆ್ಯಪ್‌ನಲ್ಲಿ ತೊಡಗಿಕೊಂಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಹಾಸ್ಯನಟ ಪ್ರಾಣೇಶ್, ನಟಿ ನೀತು ಶೆಟ್ಟಿ, ನಟ ನವೀನ್ ಕೃಷ್ಣ ಪಾಲ್ಗೊಂಡಿದ್ದರು.
ನ. 2ರಿಂದ ಶಿಕ್ಷಕರು ಶಾಲೆಗೆ ಹೋಗ್ಬೇಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − three =
Remember me
