ಬೆಂಗಳೂರು:ರೈತರು ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ ಖರೀದಿಸದ ಪರಿಣಾಮ ಬೆಳೆಗಳೆಲ್ಲ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಹಂಚಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಕೊಟ್ಟಿದ್ದಾರೆ.
ರೈತರ ಬೆಳೆ ಹೊಲಗಳಲ್ಲೇ ಕೊಳೆತು ಹೋಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜ್ಯದ ಎಲ್ಲ ಸಂಸದರು, ಶಾಸಕರುಗಳು, ಎಲ್ಲ ಪಕ್ಷಗಳ ನಾಯಕರು ಅವರವರ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ರೈತರು ಬೆಳೆದಿರುವ ಹಣ್ಣು-ತರಕಾರಿ, ಸೊಪ್ಪುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ, ಬಡವರಿಗೆ ಹಂಚಬೇಕು ಎಂದು ಮನವಿ ಮಾಡಿದ್ದಾರೆ. ಇದು ಪಕ್ಷಾತೀತ ವಾಗಿ ನಡೆಯಬೇಕು. ಹೀಗೆ ಮಾಡುವುದರಿಂದ ಸಂಕಷ್ಟದಲ್ಲಿರುವ ರೈತರನ್ನು ಉಳಿಸಿದಂತಾಗುತ್ತದೆ. ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿ, ಅವರ ಹಸಿವನ್ನೂ ನೀಗಿಸಿದಂತಾಗುತ್ತದೆ. ಇದು ಕೊರೋನಾ ವಿರುದ್ಧ ಹೋರಾಟದ ಪ್ರಮುಖ ಭಾಗವಾಗಬೇಕಿದೆ ಎಂದಿದ್ದಾರೆ.
ಶಿವಕುಮಾರ್-ಪರಮೇಶ್ವರ್ ಭೇಟಿ, ಚರ್ಚೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಜಿ.ಪರಮೇಶ್ವರ್ ಅವರನ್ನು ಶನಿವಾರ ಭೇಟಿ ಮಾಡಿ, ಕರೊನಾ ಬೆಳವಣಿಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷರಾಗಿ ಹತ್ತು ವರ್ಷಗಳ ಅನುಭವವಿರುವ ಪರಮೇಶ್ವರ್ ಅವಧಿಯಲ್ಲಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಕೊರನಾ ಪರಿಣಾಮ ತಗ್ಗಿದ ಬಳಿಕ ಪಕ್ಷದ ಪದಾಧಿಕಾರಿ ನೇಮಕ, ವಿವಿಧ ಘಟಕಗಳ ಪುನಾರಚನೆಯಾಗಬೇಕಿದೆ. ಈ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಕೆಶಿ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಲಾಕ್​ಡೌನ್ ವಿಧಿಸದೇ ಹೋಗಿದ್ದರೆ ಈವರೆಗೆ ಸೋಂಕಿತರ ಸಂಖ್ಯೆ ಎಷ್ಟಿರುತ್ತಿತ್ತು ಗೊತ್ತಾ?

ವಿಶೇಷ ವಿಮಾನಗಳ ಮೂಲಕ ಸಿಂಗಾಪುರದ 699 ಪ್ರಜೆಗಳನ್ನು ಸ್ಥಳಾಂತರ ಮಾಡಿದ ಭಾರತ; ಕೃತಜ್ಞತೆ ಸಲ್ಲಿಸಿದ ಅಲ್ಲಿನ ಸರ್ಕಾರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − 1 =
Remember me
