ಬೆಂಗಳೂರು:ಸರ್ಕಾರಿ ನೌಕರರ ಸಂಘದ ಬಳಿಕ ವೇತನ ಪರಿಷ್ಕರಣೆಗೆ ಸಿಡಿದೆದ್ದ KPTCL ನೌಕರರ ಸಂಘ ನಾಳೆಯಿಂದ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ಎಲ್ಲವೂ ಬಂದ್​ ಮಾಡಿ ಮುಷ್ಕರ ಮಾಡಲಿದೆ.
ಇದೀಗ ಮಾರ್ಚ್​ 21ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದು ಅದರ ಜತೆಗೆ ಈಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಅನಿರ್ದಿಷ್ಟವಧಿ ಮುಷ್ಕರ ಮಾಡುವುದಾಗಿ ಕರೆ ಕೊಟ್ಟು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
‘ನಾಳೆಯಿಂದ ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸಲು ನೌಕರರ ಸಂಘ ನಿರ್ಧಾರ ಮಾಡಿದ್ದು ಕೆಲಸಕ್ಕೆ ಸಂಪೂರ್ಣವಾಗಿ ಗೈರು ಹಾಜರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈಗಾಗಲೇ ನೌಕರರು ಮುಷ್ಕರ ಮಾಡುವುದಾಗಿ ಇಲಾಖೆಗೆ ಮಾಹಿತಿ ನೀಡಿದೆ. ಆದರೂ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ನಾಳೆಯಿಂದ ಅನಿರ್ದಿಷ್ಟವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಹಾಗಿದ್ರೆ ಕೆಪಿಟಿಸಿಎಲ್​ ನೌಕರರ ಬೇಡಿಕೆ ಏನು?
• ವೇತನ ಪರಿಷ್ಕರಣೆ ಆಗಿ ಸುಮಾರು 6 ವರ್ಷ ಆಗಿದೆ• ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು, ಆದರೆ ಅದು ಆಗಿಲ್ಲ• ಈ ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು• ಸರ್ಕಾರಿ ನೌಕರರಿಗೆ ಮಧ್ಯಾಂತರ ಶೇಕಡಾ 17ರಷ್ಟು ವೇತನ ಪರಿಷ್ಕರಣೆ ಮಾಡಿದ್ದಾರೆ, ನಮಗೆ ಆಗಿಲ್ಲ• KPTCL ಹಾಗೂ ಎಸ್ಕಾಂಗಳ ನೌಕರರು/ಅಧಿಕಾರಿಗಳು ನ್ಯಾಯಯುತ ಬೇಡಿಕೆ ವೇತನ ಪರಿಷ್ಕರಣೆ ಆಗಲೇಬೇಕು• 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
