ಉಡುಪಿ:ಕುಂದಾಪುರದ ವಾಜಪೇಯಿ ಎಂದೇ ಹೆಸರಾಗಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಅವರು ಅಧಿಕೃತ ಪ್ರಕಟಣೆಯನ್ನು ಕೂಡ ಹೊರಡಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಒಟ್ಟು 5 ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ-ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿರುತ್ತೇನೆ ಎಂದು ಅವರು ಘೋಷಿಸಿದ್ದಾರೆ.
ಇದನ್ನೂ ಓದಿ:ಹೆಣ್ಮಕ್ಳೂ ಸ್ಟ್ರಾಂಗು ಅನ್ನೋದಕ್ಕೆ ಈಕೆ ‘ಸಾಕ್ಷಿ’: ಏಕಾಂಗಿಯಾಗಿ ಬೈಕ್​ನಲ್ಲಿ ಜಮ್ಮು-ಕಾಶ್ಮೀರಕ್ಕೆ ಹೋಗಿಬಂದ ವಿದ್ಯಾರ್ಥಿನಿ..
ನಾನು ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿರುತ್ತೇನೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿದ್ದು, ಈ ಕ್ಷೇತ್ರದ ಎಲ್ಲಾ ವರ್ಗದ ಮತದಾರರಿಗೂ ತಮ್ಮ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಕೊಟ್ಟು ಅವರ ನೋವು-ಸಂಕಷ್ಟಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ. ಎಲ್ಲಾ ಐದೂ ಚುನಾವಣೆಗಳಲ್ಲಿಯೂ ನನ್ನನ್ನು ದಾಖಲೆ ಮತಗಳ ಅಂತರಗಳಿಂದ ಚುನಾಯಿಸಿ ಕಳುಹಿಸಿದ ಕ್ಷೇತ್ರದ ಎಲ್ಲಾ ಮತದಾರರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಕ್ಷೇತ್ರದ ಮತದಾರರಿಂದ ಪ್ರೀತಿ ವಿಶ್ವಾಸ ಗಳಿಸಿದ ಬಗ್ಗೆ ನನಗೆ ಹೆಮ್ಮೆ ಇದೆ ಎಂದೂ ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ವಿದೇಶದಲ್ಲಿ ಸದ್ ಮಾಡ್ತಿದಾರೆ ಸಿದ್: ಆಸ್ಟ್ರೇಲಿಯನ್​ ಸಿನಿಮಾಗೆ ಕನ್ನಡಿಗನ ಸಂಗೀತ ನಿರ್ದೇಶನ
ಐದು ಬಾರಿ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ನಡೆದ ಲೋಕಸಭಾ, ವಿಧಾನಸಭೆ, ವಿಧಾನಪರಿಷತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರ ಋಣಿಯಾಗಿರುತ್ತೇನೆ.
ಇದನ್ನೂ ಓದಿ:ಭೀಕರ ಅಪಘಾತ: ಮಹಿಳೆಯ ತಲೆ ನಜ್ಜುಗುಜ್ಜು, ಇನ್ನೊಬ್ಬಾಕೆಯ ಎರಡೂ ಕಾಲು ಕಟ್; ಬದುಕುಳಿದ ಮಗು!
ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ನನಗೆ ಮಾರ್ಗದರ್ಶನ ನೀಡಿದ ಹಾಗೂ ಸಹಕಾರ ನೀಡಿದ ಪಕ್ಷದ ಪ್ರಮುಖರಿಗೆ, ಎಲ್ಲ ಹಿರಿ-ಕಿರಿಯ ಸ್ನೇಹಿತರಿಗೆ, ಅಧಿಕಾರಿ ವರ್ಗದವರಿಗೆ, ಮಾಧ್ಯಮದವರಿಗೆ ಹಾಗೂ ಕ್ಷೇತ್ರದ ಎಲ್ಲ ಮತದಾರರಿಗೂ ನನ್ನ ಮನಃಪೂರ್ವಕ ಕೃತಜ್ಞತೆಗಳು.
ಮತದಾರರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ನಂಬಿಕೆಯೇ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದ್ದು, ಅದಕ್ಕಾಗಿ ನಾನು ನನ್ನ ಸಮಸ್ತ ಮತಬಾಂಧವರಿಗೂ ಮತ್ತೊಮ್ಮೆ ಕೃತಜ್ಞತೆಯನ್ನು ಸಲ್ಲಿಸುತ್ತಾ, ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ನಾನು ಪಕ್ಷೇತರರಾಗಿ ನಿಂತು ಗೆಲ್ಲಲು ಸಹಕರಿಸಿದ ಎಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರೂ ಸಹಕಾರ ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶ್ರೀನಿವಾಸ ಶೆಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + seventeen =
Remember me
