ತುಮಕೂರು:ಕೀಲು ನೋವಿನಿಂದ ಬಳಲುತ್ತಿದ್ದ ಬಡ ಮಹಿಳೆಗೆ ಉಚಿತವಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ.ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಕೊಂಡಿದ್ದ ಕೀಲು ಮತ್ತೇ ಡಿಸ್ ಲೊಕೆಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಖಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು.ಇದನ್ನೂ ಓದಿ:ಹೀಗಾಗುತ್ತೆ ನೋಡಿ ಸರಣಿ ಕಳ್ಳತನ ಮಾಡುತ್ತಿದ್ದವರು ಗ್ರಾಮಸ್ಥರ ಕೈಗೆ ಸಿಕ್ಕಾಗ…
ಈ ಶಸ್ತ್ರಚಿಕಿತ್ಸೆಗಾಗಿ ಆಕೆಗೆ ಸುಮಾರು 4 ರಿಂದ 5 ಲಕ್ಷ ರೂ. ಅಗತ್ಯವಿತ್ತು. ಆರ್ಥಿಕವಾಗಿ ದುರ್ಬಲಳಾಗಿದ್ದ ಮಹಿಳೆ ದಿಕ್ಕು ತೋಚದೆ ಶಾಸಕರ ಬಳಿ ಬಂದು ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಮಹಿಳೆಯ ನೋವನ್ನು ಆಲಿಸಿದ ಶಾಸಕರು ಆಕೆಗೆ ಸಾಂತ್ವನ ಹೇಳಿ, ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ. ಶಾಸಕರ ಈ ಸೇವೆಗೆ ವ್ಯಾಪಕವಾದ ಶ್ಲಾಘನೆ ವ್ಯಕ್ತವಾಗಿದ್ದು, ಶಾಸಕ ರಂಗನಾಥ್  ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ.ಶಾಸಕ ಡಾ.ರಂಗನಾಥ್, ಇದೇ ಮಾದರಿಯಲ್ಲಿ ಕೀಲು ಮೂಳೆ ಸಮಸ್ಯೆ ಇರುವ 23 ಮಹಿಳೆಯರಿಗೆ ಉಚಿತ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
