ಬೆಳ್ಮಣ್‌:ಇಲ್ಲೊಬ್ಬ ಅಣ್ಣ, ತಮ್ಮನ ಮನೆಗೆ ಬೆಂಕಿ ಇಟ್ಟು ಬಳಿಕ ಕಾರಿನಲ್ಲಿ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ದುರ್ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಕುದ್ರುಟ್ಟುವಿನಲ್ಲಿ ನಿನ್ನೆ(ಬುಧವಾರ) ತಡರಾತ್ರಿ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಮೃತ ದುರ್ದೈವಿ. ಕೃಷ್ಣನ ಸಹೋದರನ ಹೆಸರು ಶೇಖರ ಸಪಳಿಗ. ಶೇಖರನ ಮನೆಯಲ್ಲಿ ಕೃಷ್ಣ ಮತ್ತು ಶೇಖರನ ಸಹೋದರಿಯ ಮಗಳ ಮದುವೆ ಹಿನ್ನೆಲೆ ಬುಧವಾರ ಮೆಹಂದಿ ಶಾಸ್ತ್ರ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷ್ಣ, ರಾತ್ರಿ ತಮ್ಮನ ಮನೆಯಿಂದ ವಾಪಸ್​ ತೆರಳಿದ್ದ.
ಬುಧವಾರ ತಡರಾತ್ರಿ ಡೆತ್​ನೋಟ್​ ಬರೆದಿಟ್ಟು, ಸಮೀಪದ ಕಟ್ಟಡವೊಂದಕ್ಕೆ ಅಂಟಿಸಿ ತಮ್ಮನ ಮನೆಗೆ ಬೆಂಕಿ ಹಚ್ಚಿ ಬಳಿಕ ಓಮಿನಿ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಗಧಗಿಸುತ್ತಿದ್ದ ಕಾರು, ಕೃಷ್ಣನ ನರಳಾಟ ನೋಡಿ ಸ್ಥಳೀಯರು ಬೆಚ್ಚಿಬಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಕೃಷ್ಣ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಇನ್ನೂ ಕೆಲವರು ಈ ಘಟನೆಗೆ ಜಮೀನು ವಿವಾದ ಕಾರಣ ಎನ್ನುತ್ತಿದ್ದಾರೆ. ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.
ಸೊಂಟದ ಸ್ವಾಧೀನವಿಲ್ಲದ ವಿದ್ಯಾರ್ಥಿಗೆ ಸಂಕಷ್ಟ: ದಾನಿಗಳು ನೀಡಿದ ನೆರವಿನ ಹಣ ಬ್ಯಾಂಕ್​ ಸಾಲಕ್ಕೆ ಜಮಾ! ತಬ್ಬಲಿ ಮಗುವಿಗೆ ಇದೆಂಥಾ ಕಷ್ಟ?

ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
