ಹುಬ್ಬಳ್ಳಿ:ಕಾನೂನು ಕಾಲೇಜಿನ ಪ್ರೊಫೆಸರ್​ವೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ‌
ಇಂದು(ಶನಿವಾರ) ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ ಬಳಿಯ ನಿವಾಸದಲ್ಲಿ ನಿವೃತ್ತ ಪ್ರೊಫೆಸರ್​ ನೆತ್ತರು ಹರಿದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗದಗದ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದ ಶಂಕ್ರಪ್ಪ ಮುಶನ್ನವರ ಕೊಲೆಯಾದವರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್​ ಆಗಿದ್ದ ಶಂಕ್ರಪ್ಪ ಮುಶನ್ನವರ ಅವರು ಇತ್ತಿಚೀಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಅಳಿಯನಿಂದಲೇ ಮಾವನ(ಶಂಕ್ರಪ್ಪ) ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ವಿದ್ಯಾನಗರ ಪೊಲೀಸರು, ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಿದರು.
ಕರೊನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ! ನೇರ ಸಂಪರ್ಕದಿಂದಲೇ ಈ ರೋಗ ಹರಡುತ್ತೆ

ಮಗಳನ್ನೇ ಮರ್ಯಾದಾ ಹತ್ಯೆ ಮಾಡಿದ ಅಪ್ಪ-ಮಕ್ಕಳು! ಈ ನಡುವೆ ಗ್ಯಾಂಗ್​ ರೇಪ್​ ವದಂತಿ ಹಬ್ಬಿಸಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
