ಬೆಂಗಳೂರು:‌ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಇಂದು ದಿಢೀರನೆ ಅಧಿಕಾರಿಗಳ ಸಭೆ ನಡೆಸಿ, ಬಳಿಕ ಸ್ಪಷ್ಟನೆ ನೀಡಿದ್ದಾರೆ.
ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಸನಾತನ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಸುಬ್ರಮಣಿಯನ್​ ಸ್ವಾಮಿ
ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದೆ. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × three =
Remember me
