ಬೆಂಗಳೂರು:ಇನ್ನು ಮುಂದೆ ಶಿಕ್ಷಕರು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುವಾಗ ತಪ್ಪು ಮಾಡುವಂತಿಲ್ಲ. ನಿರ್ಲಕ್ಷ್ಯ ವಹಿಸಿದರೆ ಭಾರಿ ಬೆಲೆ ತೆರುವ ಪರಿಸ್ಥಿತಿ ಬರಲಿದೆ.
2022-2023 ಸಾಲಿನಿಂದ ಶಿಕ್ಷಣ ಇಲಾಖೆ ಮೌಲ್ಯಮಾಪನದಲ್ಲಿ ಭಾಗಿಯಾಗುವ ಉಪನ್ಯಾಸಕರು ಎಚ್ಚರ ವಹಿಸಬೇಕಾಗಿದೆ. ಇನ್ನು ಮುಂದೆ ಮೌಲ್ಯಮಾಪನದಲ್ಲಿ ನಿರ್ಲಕ್ಷ್ಯ ತೋರಿಸಿದ ಉಪನ್ಯಾಸಕರಿಗೆ ದಂಡದ ಜೊತೆಗೆ ಅಮಾನತು ಶಿಕ್ಷೆಯನ್ನೂ ನೀಡಲು ಇಲಾಖೆ ಮುಂದಾಗಿದೆ.
2021-22ರಲ್ಲಿ ಎಂಟು ಉಪನ್ಯಾಸಕರು ಮೌಲ್ಯಮಾಪನ ಮಾಡುವಾಗ ನಿರ್ಲಕ್ಷ್ಯ ತೋರಿಸಿದ್ದರು. ಇವರು ಇಂಗ್ಲಿಷ್​ ಮತ್ತು ಭೌತಶಾಸ್ತ್ರ ವಿಷಯಗಳ ಉಪನ್ಯಾಸಕರಾಗಿದ್ದರು. ಇವರಲ್ಲಿ ಒಬ್ಬರಂತೂ ಮರು ಮೌಲ್ಯಮಾಪನ ಮಾಡುವಾಗ ಒಂಬತ್ತು ಪುಟಗಳನ್ನು ತಿದ್ದಿರಲಿಲ್ಲ. ಇಂತಹ ಎಂಟು ಉಪನ್ಯಾಸಕರನ್ನು ಅಮಾನತು ಮಾಡುವ ನಿರ್ಧಾರಕ್ಕೆ ಇಲಾಖೆ ಬಂದಿದೆ. ಇದು ಉಳಿದ ಉಪನ್ಯಾಸಕರಿಗೆ ಎಚ್ಚರಿಕೆಯ ಗಂಟೆ ಆಗಿದೆ.
‘ಕಳೆದ ಒಂದು ತಿಂಗಳ ಹಿಂದೆ SSLC ಹಾಗೂ PUC ಪರೀಕ್ಷೆಗಳ ಪೂರ್ವ ತಯಾರಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮೌಲ್ಯಮಾಪನದಲ್ಲಿ ತಪ್ಪೆಸಗಿದ ಉಪನ್ಯಾಸಕರ ಮೇಲೆ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರಗಳು 2022-2023 ಸಾಲಿನ ಪರೀಕ್ಷೆ ಮೌಲ್ಯಮಾಪನಕ್ಕೂ ಅನ್ವಯವಾಗಲಿದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
