ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್​ಗೆ ಚುನಾಯಿತರಾಗುವ ಏಳು ಸದಸ್ಯರ ಆಯ್ಕೆಗೆ ಚುನಾವಣೆ ಜೂನ್ 29ಕ್ಕೆ ನಡೆಯಲಿದೆ. ಈ ಸಂಬಂಧ ವೇಳಾಪಟ್ಟಿ ಇಂದು ಪ್ರಕಟವಾಗಿದೆ. ಹಾಲಿ ಸದಸ್ಯರಾದ ನಸೀರ್ ಅಹ್ಮದ್, ಜಯಮ್ಮ, ಎಂ.ಸಿ.ವೇಣುಗೋಪಾಲ್​, ಎನ್​.ಎಸ್​.ಬೋಸ್​ ರಾಜು, ಎಚ್​.ಎಂ.ರೇವಣ್ಣ, ಟಿ.ಎ.ಶರವಣ, ಡಿ.ಯು. ಮಲ್ಲಿಕಾರ್ಜುನ ಇವರ ಸದಸ್ಯತ್ವದ ಅವಧಿ ಈ ತಿಂಗಳ 30ಕ್ಕೆ ಕೊನೆಗೊಳ್ಳುತ್ತದೆ.
ಈ ಸ್ಥಾನಗಳಿಗೆ ಮತ್ತೆ ಚುನಾವಣೆ ಮೂಲಕ ಸದಸ್ಯರನ್ನು ಆಯ್ಕೆ ಮಾಡಲು ಪ್ರಕಟವಾಗಿರುವ ವೇಳಾ ಪಟ್ಟಿ ಪ್ರಕಾರ, ಜೂನ್ 11ರಂದು ಅಧಿಸೂಚನೆ ಪ್ರಕಟವಾಗಲಿದೆ. ಜೂನ್ 18ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುತ್ತದೆ. 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆದಿನವಾಗಿರುತ್ತದೆ.
ಇದನ್ನು ಓದಿದ್ದೀರಾ:ಕತ್ತೆಯನ್ನೂ ಬಿಡಲಿಲ್ಲ ಪಾಕ್ ಪೊಲೀಸರು!!!
ಜೂನ್ 29ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ. 30ನೇ ತಾರೀಕಿನೊಳಗೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳೂ ಮುಗಿದಿರಬೇಕು.
ವಿಶ್ವನಾಥ್, ಎಂಟಿಬಿ ನಾಗರಾಜ್, ಶಂಕರ್ ಅವರು ಮತ್ತೆ ವಿಧಾನ ಮಂಡಲ ಪ್ರವೇಶಿಸುವುದಕ್ಕೆ ಈ ಮೂಲಕ ವೇದಿಕೆ ಸಜ್ಜಾಗುತ್ತಿದೆ ಎಂಬ ಮಾತು ಕೇಳಿಬಂದಿದೆ. ವೇಳಾಪಟ್ಟಿ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಇನ್ನಷ್ಟು ಹೆಚ್ಚಾಗಲಿದೆ.
ರಾಜ್ಯ ರಾಜಧಾನಿಯಲ್ಲಿ ಷಟರ್ ಕತ್ತರಿಸಿ 1 ಕೆ.ಜಿ. ಚಿನ್ನ, 3 ಕಿಲೋ ಬೆಳ್ಳಿ ವಸ್ತು ದೋಚಿದ ಕಳ್ಳರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
