ಹುಬ್ಬಳ್ಳಿ:ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಇದ್ದಂತೆ, ತಾವು ಶುದ್ಧ ಹಸ್ತರು ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಇದನ್ನೂ ಓದಿ:ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪುಮಾಡಲ್ಲ: ಸಿಎಂ ಬೆನ್ನಿಗೆ ನಿಂತ ಈಶ್ವರಾನಂದಪುರಿ ಸ್ವಾಮೀಜಿ!
ಇಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಉನ್ನತ ಹುದ್ದೆ, ಅಧಿಕಾರದಲ್ಲಿ ಇರುವವರಿಗೆ ಕಾನೂನು ಮತ್ತು ಸಂವಿಧಾನದ ಭಯ ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಅಳೆದು ತೂಗಿ ಕ್ರಮ ಜರುಗಿಸಿದ್ದಾರೆ ಎಂದು ಹೇಳಿದರು.
ತನಿಖೆಗೆ ಸಿಎಂ ಸಹಕರಿಸಲಿ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಲೋಕಾಯುಕ್ತ ಅಥವಾ ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಯುತ್ತದೆ. ಸಿಎಂ ಸಂಪೂರ್ಣ ತನಿಖೆಗೆ ಸಹರಿಸಲಿ ಎಂದರು.
ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ವಿರುದ್ಧ ಆರೋಪ ಬರುತ್ತಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು ಎಂದು ಜೋಶಿ ನೆನಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಕಿದ್ದರೆ ಕಾನೂನು ಹೋರಾಟ ಮಾಡಲಿ. ಒಬ್ಬ ಸಾಮಾನ್ಯ ನಾಗರಿಕನಿಗೂ ಕಾನೂನು ಹೋರಾಟಕ್ಕೆ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕ ಬದುಕಿನಲ್ಲಿ ಆಳುವವರು ಮೊದಲು ಶುದ್ಧ ಹಸ್ತರಾಗಿರಬೇಕು. ಆಗ ಪ್ರಜಾಪ್ರಭುತ್ವದ ಮೇಲೆ ಜನಕ್ಕೆ ನಂಬಿಕೆ ಬರುತ್ತದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ರಾಜೀನಾಮೆ ನೀಡಲಿ. ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು.
ಕೇಂದ್ರ ತನಿಖೆ ನಡೆಸುತ್ತಿಲ್ಲ:ಕೇಂದ್ರದ ಯಾವುದೇ ಸಂಸ್ಥೆಗಳು ತನಿಖೆ ನಡೆಸುತ್ತಿಲ್ಲ. ರಾಜ್ಯದಲ್ಲಿ ಅವರದ್ದೇ ಸರ್ಕಾರವಿದೆ. ಲೋಕಾಯುಕ್ತದಂತಹ ತನಿಖೆ ಎದುರಿಸಲಿ ಎಂದರು.
ರಾಜಕಾರಣ ಮಾಡಲು ಹೊರಟರೆ ಜನರೇ ಉತ್ತರ ಕೊಡುತ್ತಾರೆ:ರಾಜ್ಯಪಾಲರು ಸಿಎಂ ಮೇಲೆ ತನಿಖೆಗೆ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ರಾಜಕೀಯ ಮಾಡಲು ಹೊರಟರೆ ಜನರೇ ಅದಕ್ಕೆ ಉತ್ತರ ಕೊಡುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಈಗ ಕೇಂದ್ರದ ಯಾವುದೇ ತನಿಖಾ ಸಂಸ್ಥೆಗಳು ಬಂಧಿಸಲು ಹೊರಟಿಲ್ಲ. ಹಾಗಿದ್ದ ಮೇಲೆ ಪ್ರತಿಭಟನೆ, ಪ್ರತಿರೋಧವೇಕೆ? ಎಂದು ಸಚಿವ ಜೋಶಿ ಪ್ರಶ್ನಿಸಿದರು.
ಹಂಸರಾಜ ಭಾರದ್ವಜ್ ಕಾಂಗ್ರೆಸ್ ಏಜೆಂಟರಾಗಿದ್ದರೆ?:ಪ್ರಸ್ತುತ ರಾಜ್ಯಪಾಲರನ್ನು ಬಿಜೆಪಿ ಏಜೆಂಟ್ ಎನ್ನುವುದು ಸರಿಯಲ್ಲ. ಹಾಗಾದರೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಇದ್ದ ರಾಜ್ಯಪಾಲ ಹಂಸರಾಜ ಭಾರದ್ವಜ ಅವರು ಕಾಂಗ್ರೆಸ್ ಏಜೆಂಟರಾಗಿದ್ದಾರೆ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಸಾಂವಿಧಾನಿಕವಾಗಿ ಗೌರವಾನ್ವಿತ ಹುದ್ದೆಯಲ್ಲಿ ಇರುವವರ ಬಗ್ಗೆ ಹೀಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ದುರುದ್ದೇಶ, ಹಾಸ್ಯಾಸ್ಪದ ನಿರ್ಧಾರ: ಡಿ.ಕೆ.ಸುರೇಶ್ ಟೀಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
