ಜಮ್ಮು-ಕಾಶ್ಮೀರದ ಪ್ರಸಿದ್ಧ ಧಾರ್ವಿುಕ ಶ್ರದ್ಧಾಕೇಂದ್ರವಾದ ವೈಷ್ಣೋದೇವಿಯ ದರ್ಶನಕ್ಕೆ ಹೊರಟಿದ್ದ ಯಾತ್ರಿಕರ ಬಸ್ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ, 9 ಭಕ್ತರ ಸಾವಿಗೆ ಕಾರಣರಾಗಿದ್ದಾರೆ. ಬಸ್​ನಲ್ಲಿ ಉತ್ತರಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಮೂಲದ ಒಟ್ಟು 41 ಯಾತ್ರಿಕರಿದ್ದರು. ಗುಡ್ಡಗಾಡು ಪ್ರದೇಶದಲ್ಲಿ ಬಸ್ ಹೋಗುತ್ತಿದ್ದಾಗ ಭಯೋತ್ಪಾದಕರು ಬೆಟ್ಟಪ್ರದೇಶದ ಮೇಲೆ ನಿಂತು ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹಿಂದೆಲ್ಲ ಉಗ್ರಗಾಮಿಗಳು ಭದ್ರತಾ ಪಡೆಗಳ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರು. ಈಗ ಯಾತ್ರಾರ್ಥಿಗಳ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಗಮನಾರ್ಹ.
ಕೇಂದ್ರದಲ್ಲಿ ಎನ್​ಡಿಎ ಅಧಿಕಾರಕ್ಕೆ ಬಂದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯ ಘಟನೆಗಳು ಕ್ರಮೇಣ ಕಡಿಮೆಯಾಗುತ್ತ ಸಾಗಿರುವುದು ಅಂಕಿಅಂಶಗಳಿಂದ ವೇದ್ಯವಾಗುತ್ತದೆ. ತತ್ಪರಿಣಾಮ, ಆ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಮತ್ತೆ ಇಂಬು ದೊರೆಯುತ್ತಿದೆ. ಅದರಲ್ಲೂ ವಿಶೇಷವಾಗಿ ಧಾರ್ವಿುಕ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ಸಹಿಸಲಾಗದ ವಿಚ್ಛಿದ್ರಕಾರಿ ಶಕ್ತಿಗಳು ಪ್ರವಾಸಿಗರ ಮನೋಸ್ಥೈರ್ಯ ಉಡುಗಿಸುವ ಪ್ರಯತ್ನಕ್ಕೆ ಕೈಹಾಕಿರುವುದು ಸ್ಪಷ್ಟವಾಗಿದೆ.

ಇದಲ್ಲದೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಯದ ಆಸುಪಾಸಿನಲ್ಲೇ, ಅಂದರೆ ಭಾನುವಾರ ಸಂಜೆ 6 ಗಂಟೆಯ ವೇಳೆಗೆ, ಭಯೋತ್ಪಾದಕರು ದಾಳಿ ನಡೆಸಿರುವುದು ಗಮನಿಸಬೇಕಾದ ಮತ್ತೊಂದು ವಿಷಯ. ತಾವಿನ್ನೂ ಜೀವಂತವಾಗಿದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ಭಾರತದ ಜನತೆಗೆ ಕೊಡುವುದಕ್ಕಾಗಿಯೇ ಉಗ್ರರು ಈ ಸಮಯವನ್ನು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಿಕೊಂಡಂತಿದೆ. ಇದರಿಂದ ಭಾರತೀಯರು ಧೃತಿಗೆಡುವ ಪ್ರಮೇಯವೇ ಇಲ್ಲ. ಕಳೆದ ಹತ್ತು ವರ್ಷಗಳ ಎನ್​ಡಿಎ ಅಧಿಕಾರಾವಧಿಯಲ್ಲಿ ಇಂತಹ ಘಟನೆಗಳು ನಡೆದಾಗಲೆಲ್ಲ ಸರ್ಕಾರ ಉಗ್ರರಿಗೆ ತಕ್ಕ ಉತ್ತರ ನೀಡಿದೆ. ಈ ಬಾರಿಯೂ 9 ಜನರ ಸಾವಿಗೆ ಮತ್ತು ಹಲವರು ಗಾಯಗೊಳ್ಳುವುದಕ್ಕೆ ಕಾರಣವಾದ ಉಗ್ರರಿಗಾಗಿ ಶೋಧ ನಡೆಯುತ್ತಿದೆ. ಘಟನೆಯ ತನಿಖೆಯನ್ನು ನ್ಯಾಷನಲ್ ಇನ್​ವೆಸ್ಟಿಗೇಷನ್ ಏಜೆನ್ಸಿ (ಎನ್​ಐಎ) ಕೈಗೆತ್ತಿಕೊಂಡಿದೆ.
ಈ ಮಧ್ಯೆ, ದಾಳಿಯ ಹೊಣೆಯನ್ನು ದಿ ರೆಸಿಸ್ಟನ್ಸ್ ಫ್ರಂಟ್ (ಟಿಆರ್​ಎಫ್) ಎಂಬ ಸಂಘಟನೆ ಹೊತ್ತುಕೊಂಡಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ಆರ್ಟಿಕಲ್ 370ನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ಟಿಆರ್​ಎಫ್ ಹುಟ್ಟಿಕೊಂಡಿದ್ದು, ಅದನ್ನು 2023ರಲ್ಲಿ ನಿಷೇಧಿಸಲಾಗಿದೆ. ಇದು ಪಾಕಿಸ್ತಾನ ಬೆಂಬಲಿತ ಸಂಘಟನೆ ಎಂಬುದು ಗುಟ್ಟೇನಲ್ಲ. ಹಾಗಾಗಿ ಭಾನುವಾರದ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೇಂದ್ರದ ಎನ್​ಡಿಎ ಸರ್ಕಾರ, ಪಾಕಿಸ್ತಾನಕ್ಕೆ ಕಟ್ಟೆಚ್ಚರ ನೀಡುವುದಲ್ಲದೆ, ಮತ್ತೆ ಉಗ್ರಗಾಮಿಗಳು ತಲೆ ಎತ್ತದಂತೆ ಸದೆಬಡಿಯುವ ಕಾರ್ಯಕ್ಕೆ ಮುಂದಾಗಬೇಕಿದೆ.
ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!

ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ರೈಲು ಸೇವೆ ಸ್ಥಗಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
