ದಾವಣಗೆರೆ:ಅನಾಮಧೇಯ ವ್ಯಕ್ತಿಯೊಬ್ಬ ಬಿಜೆಪಿ ನಾಯಕರಾದ ಸಿ.ಟಿ.ರವಿ, ಬಸನಗೌಡ ಯತ್ನಾಳ್, ರೇಣುಕಾಚಾರ್ಯ ಅವರ ಕುರಿತು ಅವಾಚ್ಯವಾಗಿ ಮಾತನಾಡಿದ್ದಾನೆ. ಅಲ್ಲದೆ, ಶಾಸಕ ರೇಣುಕಾಚಾರ್ಯ ಮತ್ತು ಅವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಈ ಕುರಿತು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ 10ರಿಂದ ಅನಾಮಧೇಯ ವ್ಯಕ್ತಿಯೊಬ್ಬ ಅಪರಿಚಿತ ಮೊಬೈಲ್​ಫೋನ್ ಸಂಖ್ಯೆಯಿಂದ ಪದೇಪದೆ ಕರೆ ಮಾಡಿದ್ದಲ್ಲದೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾನೆ. ಹಿಜಾಬ್, ಹಲಾಲ್, ಮದರಸಾಗಳ ಸುದ್ದಿ ಮಾತನಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆ ವ್ಯಕ್ತಿ, ಅವುಗಳ ಕುರಿತು ಮಾತನಾಡಬಾರದು ಎಂದು ಬೆದರಿಕೆಯೊಡ್ಡಿದ್ದಾನೆ.
ನಿನ್ನನ್ನು ನಾಲ್ಕೈದು ದಿನಗಳಲ್ಲಿ ಕೊಚ್ಚಿ ಹಾಕುವೆ, ನಿನ್ನನ್ನೂ ನಿನ್ನ ಮಗನನ್ನೂ ತೆಗೆಯುತ್ತೇವೆ ಎಂದೆಲ್ಲ ಆ ವ್ಯಕ್ತಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಒಡ್ಡಿದವನ ಮಾತಿನ ಶೈಲಿ ಕರಾವಳಿ ಕಡೆಯವರ ಥರ ಇದ್ದು, ಆತನನ್ನು ಪತ್ತೆ ಮಾಡಿ ಕ್ರಮಕೈಗೊಳ್ಳಬೇಕು ಎಂದು ರೇಣುಕಾಚಾರ್ಯ ದೂರು ನೀಡಿದ್ದಾರೆ.
ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳನ್ನು ಬೇರೆ ಮಾಡಿದ ಸಂಬಂಧಿಕರು: ಮದ್ವೆಯಾಗಿದ್ರೂ ಬಿಡಲಿಲ್ಲ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
