ಬೆಂಗಳೂರು:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್​ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್​, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಇದನ್ನೂ ಓದಿ:ಗೆದ್ದು ಬೀಗಿದ ತಂದೆ-ಮಗ; ಕಾಂಗ್ರೆಸ್​​ಗೆ ಆಶೀರ್ವಾದ ಮಾಡಿದ ದಾವಣಗೆರೆ ಜನತೆ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​, ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, ಕೆ.ಆರ್​. ನಗರ ಜೆಡಿಎಸ್​ ಅಭ್ಯರ್ಥಿ ಸಾರಾ ಮಹೇಶ್​​, ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ, ಬೀದರ್​ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್​ ಸೋತಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್​, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
