ಕಾಳಗಿ (ಕಲಬುರಗಿ): ಮುಂಬೈನಿಂದ ಆಗಮಿಸಿದ ವಲಸಿಗರನ್ನು ಕ್ವಾರಂಟೈನ್ ಮಾಡಿರುವ ಕೋರವಾರ ಗ್ರಾಮದ ನವೋದಯ ವಿದ್ಯಾಲಯ ಕೇಂದ್ರದಲ್ಲಿ ಮಂಗಳವಾರ ಬೆಳಗಿನ ಉಪಾಹಾರದಲ್ಲಿ ಸತ್ತು ಬಿದ್ದ ಹಲ್ಲಿ ಪತ್ತೆಯಾಗಿದೆ!
ಮೂರ‌್ನಾಲ್ಕು ಜನ ಸೋಂಕಿತರು ಇರುವ ಈ ಕೇಂದ್ರದಲ್ಲಿ ಸುಮಾರು 450 ಜನರು ಕ್ವಾರಂಟೈನ್‌ಗೆ ಒಳಪಟ್ಟಿದ್ದು, ಮಂಗಳವಾರ ಬೆಳಗ್ಗೆ ಮಾಡಿದ್ದ ಅವಲಕ್ಕಿ ಉಪಾಹಾರದಲ್ಲಿ ಸತ್ತ ಹಲ್ಲಿ ಕಾಣಿಸಿದೆ. ಸಿಟ್ಟಿಗೆದ್ದ ಅಲ್ಲಿನ ವಾಸಿಗಳು ಅಡುಗೆ ಮಾಡುವವರನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿಕಲ್ಯಾಣ ಕರ್ನಾಟಕ ಭಾಗಕ್ಕೆ ಬುಧವಾರದಿಂದ ಬಸ್ ಸಂಚಾರ
ಅಲ್ಲದೆ ಉಪಾಹಾರ ತ್ಯಜಿಸಿ ತಟ್ಟೆಯಲ್ಲಿದ್ದ ಹಲ್ಲಿಯ ಫೋಟೋ ವಿಡಿಯೋ ತೆಗೆದು ವೈರಲ್ ಮಾಡುವ ಮೂಲಕ ಸಂಬಂಧಿತ ಅಧಿಕಾರಿ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಶಾಸಕ ಡಾ.ಅವಿನಾಶ ಜಾಧವ್, ಮಾಹಿತಿ ಪಡೆದು ತನಿಖೆಗೆ ಆದೇಶಿಸಿದ್ದಾರೆ. ಅಡುಗೆ ಮಾಡುತ್ತಿರುವವರನ್ನು ತಕ್ಷಣವೇ ತೆಗೆದು ಹೊಸಬರನ್ನು ನೇಮಿಸುವಂತೆ ಸೂಚಿಸಿದ್ದಾರೆ.
ಮುಂಬೈನಲ್ಲಿ ಮಾಡುತ್ತಿದ್ದದ್ದು ಕೂಲಿ ಕೆಲಸ, ಇಲ್ಲಿ ಬೇಕಂತೆ ಬಾಸುಮತಿ ಅನ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
