ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬೆಂಗಳೂರಿನ ಕೇಂದ್ರ ಸೇರಿ ಜಿಲ್ಲಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ರೂ.ನಗದನ್ನು ವಶಪಡಿಸಿಕೊಂಡಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ರಾಣಿಬೆನ್ನೂರು ಕಚೇರಿಯಲ್ಲಿ ೮.೯೦ ಲಕ್ಷ ರೂ. ನಷ್ಟು ದಾಖಲೆಗಳಿಲ್ಲದ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಿಗಮದ ವ್ಯವಸ್ಥಾಪಕ ನಿದೇರ್ಶಕರ ನಿವಾಸ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಮತ್ತು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ದಾಳಿ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ತಂಡಗಳು ದಾಳಿ ನಡೆಸಿದರೆ, ಹಾವೇರಿಯಲ್ಲಿ ಎರಡು ತಂಡ, ಧಾರವಾಡ ಮತ್ತು ಗದಗ, ಬೆಳಗಾವಿಯ ಜಿಲ್ಲಾ ಕಚೇರಿಯಗಳ ಮೇಲೆ ತಲಾ ಒಂದು ತಂಡ ತಡರಾತ್ರಿಯವರೆಗೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಗಂಗಾಕಲ್ಯಾಣಯಡಿ ಸಬ್‌ಮರ್ಸಿಬಲ್ ಪಂಪ್ ನೀಡುವುದರಲ್ಲಿ ಅವ್ಯವಹಾರ ಹಾಗೂ ಭೂ ಒಡೆತನ, ಉದ್ಯಮಶೀಲನೆ ಸೇರಿ ಇತರೆ ಯೋಜನೆಗಳಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈ ದಾಳಿ ನಡೆಸಿದೆ. ೪೦ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶನಿವಾರ ಬೆಳಗ್ಗೆ ೧೧ ಗಂಟೆಯ ಸಮಯದಲ್ಲಿ ಏಕಕಾಲದಲ್ಲಿ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಶನಿವಾರ ತಡರಾತ್ರಿಯವರೆಗೂ ದಾಳಿ ನಡೆಸಲಾಗಿದ್ದು, ಈ ದಾಳಿ ಮುಂದುವರಿಯಲಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − six =
Remember me
