ಹುಣಸೂರು:ಇಲ್ಲಿನ ಯಶೋಧರಪುರ ಬಳಿ 100 ಅಡಿ ಆಳದ ಹಾರಂಗಿ ನಾಲೆಗೆ ಲಾರಿಯೊಂದು ಬಿದ್ದಿದ್ದು, ಆಶ್ಚರ್ಯಕರ ರೀತಿಯಲ್ಲಿ ಚಾಲಕ ಪಾರಾಗಿದ್ದಾನೆ.
ಮಂಗಳವಾರ ಪಿರಿಯಾಪಟ್ಟಣದಲ್ಲಿ ಕಾಫಿ ಬೂಸಾ ಮೂಟೆಗಳನ್ನು ಇಳಿಸಿ ನಂತರ ಹುಣಸೂರು ಮಾರ್ಗವಾಗಿ ಕೆ.ಆರ್​.ನಗರಕ್ಕೆ ಲಾರಿ ಸಾಗುತ್ತಿತ್ತು. ಯಶೋಧರಪುರ ಸಮೀಪ ಎದುರಿನಿಂದ ಬಂದ ವಾಹನದ ಬೆಳಕಿಗೆ ಲಾರಿ ಚಾಲಕ ಗಲಿಬಿಲಿಗೊಂಡಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹಾರಂಗಿ ನಾಲೆ ಕಡೆ ಸಾಗಿ 100 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ.
ಇದನ್ನೂ ಓದಿರಿಗ್ರಾಪಂ ಚುನಾವಣೆ ಮುಂದೂಡಿಕೆಗೆ ಕಾಂಗ್ರೆಸ್ ವಿರೋಧ.. ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದು!
ಕೆ.ಆರ್​. ನಗರದ ನಿವಾಸಿ, ಚಾಲಕ ಮಹಮದ್​ ವಾಸಿಂಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾನೆ. ಲಾರಿ ಸಂಪೂರ್ಣ ಜಖಂಗೊಂಡಿದೆ. ಈ ಲಾರಿ ಕೆ.ಆರ್​. ನಗರದ ಮಹಮದ್​ ಇಲ್ಯಾಸ್​ ಅವರದ್ದು.
ಬುಧವಾರ ಬೆಳಗ್ಗೆ ಜೆಸಿಬಿ ಮೂಲಕ ಲಾರಿ ಮೇಲೆತ್ತುವ ಕಾರ್ಯಾಚರಣೆ ನಡೆಯಿತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿರಿಸುವರ್ಣಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತರಿಸಲು ಸಿಎಂ ಗಡುವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
