ಬೆಂಗಳೂರು:ಹದಿಹರೆಯದಲ್ಲೇ ಪ್ರೀತಿಯ ಗೀಳಿಗೆ ಬಿದ್ದ ಯುವತಿಯೊಬ್ಬಳು ದುರಂತ ಅಂತ್ಯ ಕಂಡಿರುವ ಘಟನೆ ನಗರದ ಆರ್.ಎಂ.ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿ ಆತ್ಮಹತ್ಯೆ ಮಾಡಿಕೊಂಡ ಎರಡೇ ತಿಂಗಳಿಗೆ ಮಗಳು ಸಹ ನೇಣಿಗೆ ಶರಣಾಗಿದ್ದಾಳೆ. ಜೆಮಿನಿ (19) ನೇಣಿಗೆ ಶರಣಾದ ಯುವತಿ. ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಜೆಮಿನಿ, ಕಾಲೇಜಿನಲ್ಲಿದ್ದಾಗಲೇ ಭರತ್ ಎಂಬಾತನನ್ನು ಪ್ರೀತಿಸುತ್ತಿದ್ದಳು.
ಇದನ್ನೂ ಓದಿರಿ:ಖುರ್ಚಿಯಲ್ಲಿ ಪ್ರಿಯತಮನನ್ನು ಕಟ್ಟಿ ಸೆಕ್ಸ್​ ಮಾಡಲು ಹೋದ ಮಹಿಳೆ; ಕಾಮದಾಸೆಯಲ್ಲೇ ಯಮಲೋಕ ಸೇರಿದ ಯುವಕ
ಗಾಂಜಾ ವ್ಯಸನಿಯಾಗಿದ್ದ ಭರತ್ ಸಹವಾಸ ಬೇಡವೆಂದು ಪಾಲಕರು ಬುದ್ಧಿವಾದ ಹೇಳಿದ್ದರು. ಆದರೂ, ಪೋಷಕರ ಮಾತನ್ನು ಧಿಕ್ಕರಿಸಿ ಜೆಮಿನಿ, ಭರತ್​ನನ್ನು ಪ್ರೀತಿಸುತ್ತಿದ್ದಳು. ಇತ್ತ ಮಗಳ ವರ್ತನೆಗೆ ಬೇಸತ್ತ ತಾಯಿ, ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು.
ತಾಯಿಯ ಸಾವಿನ ನಂತರವೂ ಜೆಮಿನಿ, ಭರತ್ ಸಹವಾಸ ಮುಂದುವರೆಸಿದ್ದಳು. ಜ.1 ರಂದು ಜೆಮಿನಿಯ ತಂದೆ ನಾಗರಾಜ್​ಗೆ ಕರೆ ಮಾಡಿದ್ದ ಭರತ್, ಜೆಮಿನಿಗೆ ಶುಭಕೋರಲು ಫೋನ್ ಕೊಡುವಂತೆ ಕೇಳಿದ್ದ. ಆದರೆ, ನಾಗರಾಜ್​ ಫೋನ್​ ಕೊಡದೆ ಭರತ್​ಗೆ ಬೈದು ಬುದ್ಧಿವಾದ ಹೇಳಿದ್ದ.
ಇದನ್ನೂ ಓದಿರಿ:ಭಯದಿಂದಲೇ ಎಸ್​ಬಿಐ ಉದ್ಯೋಗಿ ಆತ್ಮಹತ್ಯೆಗೆ ಶರಣು: ಡೆತ್​ನೋಟ್​ನಲ್ಲಿತ್ತು ನೋವಿನ ನುಡಿ!
ಇದಾದ ಕೆಲವೇ ದಿನಗಳಲ್ಲಿ ಅಂದರೆ ಜ.5 ರಂದು ಜೆಮಿನಿ ನೇಣಿಗೆ ಶರಣಾಗಿದ್ದಾಳೆ. ತಂದೆ ನಾಗರಾಜ್ ದೂರಿನನ್ವಯ ಪ್ರಕರಣ ದಾಖಲಲಾಗಿದ್ದು, ಆರೋಪಿ ಭರತ್​ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಬ್ಬಿನ ಗದ್ದೆಯಲ್ಲಿ ಅತ್ತಿಗೆ ಮೈದುನನ ಚಕ್ಕಂದ! ಸರಸದಲ್ಲಿದ್ದ ಜೋಡಿಯನ್ನು ಕೊಚ್ಚಿ ಕೊಂದ ಗಂಡ!

ಹಿರಿಯರ ಒಪ್ಪಿಗೆ ಪಡೆದು ಪ್ರೇಮವಿವಾಹವಾದ ನವಜೋಡಿಗೆ ಮೂರೇ ತಿಂಗಳಲ್ಲಿ ಕಾದಿತ್ತು ಬಿಗ್​ ಶಾಕ್​!

ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
