ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದು, ಸಾಧಾರಣ ಪ್ರಮಾಣದ ಮಳೆ ಮಾತ್ರ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಗಾಳಿ ಬೀಸುವ ಪ್ರಮಾಣವೂ ಕಡಿಮೆಯಾಗಿದ್ದು, ಸರ್ಕಾರಕ್ಕೆ ಆತಂಕ ತಂದೊಡಿದ್ದ ಪ್ರವಾಹ ಪರಿಸ್ಥಿತಿ ತಹಬಂದಿಗೆ ಬಂದಿದೆ.
ಇದರ ಹೊರತಾಗಿಯೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯ ವಿವಿಧ ಭಾಗಗಳಲ್ಲಿ ಗುರುವಾರ ವ್ಯಾಪಕವಾಗಿ ಮಳೆಯಾಗಿದೆ. ಸೋಮವಾರದ ವರೆಗಿನ ಮುನ್ಸೂಚನೆಯಂತೆ ಸಾಧಾರಣ ಪ್ರಮಾಣದ ಮಳೆಯೇ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ಒಳನಾಡು ಪ್ರದೇಶಗಳಲ್ಲೂ ಸಾಧಾರಣ ಪ್ರಮಾಣದ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ವರ್ಷಧಾರೆ ಆಗಲಿದ್ದರೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹಗುರದಿಂದ ಸಾಧಾರಣ ಪ್ರಮಾಣದ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
