ಶಿವಮೊಗ್ಗ:ಸೆಪ್ಟೆಂಬರ್​ 30ರಂದು ನಡೆದ ಈದ್​ ಮೆರವಣಿಗೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ತಲವಾರು ಝಳಪಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ನೀಡಿರುವ ವಿವರಣೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಮಂಗಳವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು, ದೊಡ್ಡ ಮಟದಲ್ಲಿ ಏನು ಗಲಭೆ ನಡೆದಿಲ್ಲ. ಜನರು ಭಯಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಗಾಯಾಳುಗಳ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗದಲ್ಲಿ ದೊಡ್ಡ ಮಟ್ಟದಲ್ಲಿ ಗಲಭೆ ಏನು ನಡೆದಿಲ್ಲ. ಸಾರ್ಜನಿಕರು ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ ಈ ಘಟನೆ ಆಗಬಾರದಿತ್ತು. ಗಾಯಾಳುಗಳಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುತ್ತೇನೆ. ಕೊಡುವುದಾದರೆ ಸರ್ಕಾರದಿಂದ ಕೊಡಿಸುತ್ತೇನೆ. ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಶಿವಮೊಗ್ಗ ಶಾಂತಿಯಿಂದ ಇದೆ, ಜನ ಸಹಕರಿಸುತ್ತಿದ್ದಾರೆ. ಕಾನೂನು ಹದ್ದುಬಸ್ತು ಮಾಡಬೇಕು. ಅಧಿಕಾರಿಗಳು ಆ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ :ಹಳಿ ತಪ್ಪಿದ ನಮ್ಮ ಮೆಟ್ರೋ ರೀ ರೈಲು; ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ
ಗಣಪತಿ ಹಬ್ಬ ಚೆನ್ನಾಗಿ, ಅದ್ಧೂರಿಯಾಗಿ ಆಯ್ತು. ಈದ್ ಮಿಲಾದ್ ಮೆರವಣಿಗೆ ಕೂಡ ಚೆನ್ನಾಗಿ ಆಯ್ತು. ಆದರೆ, ಕೊನೆಯಲ್ಲಿ ಕೆಲವರಿಂದ ಅಶಾಂತಿ ಉಂಟಾಗಿದೆ. ಗಲಭೆ ಹಿನ್ನೆಲೆಯಲ್ಲಿ 24 ಎಫ್ಐಆರ್ ಆಗಿದೆ, 60 ಮಂದಿಯನ್ನು ಬಂಧಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಾನು ಕಾನೂನಿನ ಪರ ನಿಲ್ಲುವವನು, ಯಾರ‍್ಯಾರು ಶುರು ಮಾಡಿದ್ದಾರೆ, ಅದರ ಭಾಗಿವಾಗಿದ್ದಾರೆ, ಯಾರನ್ನೂ ಬಿಡುವುದಿಲ್ಲ. ಈಗಾಗಲೇ ಅಧಿಕಾರಿಗಳಿಗೆ ಹೇಳಿದ್ದೇನೆ. ಜನರಿಗೂ ಶಾಂತಿ ಕಾಪಾಡಲು ಮನವಿ ಮಾಡುತ್ತೇನೆ.
ತಲವಾರ್​ ಝಳಪಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಸಂಪ್ರದಾಯದಲ್ಲಿ ನಾವು ಹೇಗೆ ತ್ರಿಶೂಲ ಹಿಡಿಯುತ್ತೇವೋ ಅದೇ ರಿತಿ ಅವರು ತಲ್ವಾರ್​ ಹಿಡಿದಿದ್ದಾರೆ. ಪ್ಲಾಸ್ಟಿಕ್‌ನಲ್ಲಿ ಮಾಡಿದ ಆಯುಧ ಹಿಡಿದಿದ್ದಾರೆ. ಅದರಿಂದ ಯಾವುದೇ ಅನಾಹುತವಾಗಿಲ್ಲ. ಅವರು ಕಲ್ಲು, ಕೋಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆಯೇ ಹೊರತು ಎಲ್ಲೂ ತಲ್ವಾರ್, ಖಡ್ಗದಿಂದ ಯಾರ ಮೇಲೂ ದಾಳಿಯಾಗಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
