ಬೆಳಗಾವಿ:ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮಹಾರಾಷ್ಟ್ರ ಪುಂಡರು ಪುಂಡಾಟ ಮುಂದುವರಿಸಿದ್ದು, ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ 400ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.
ಈ ಕುರಿತು ಪ್ರತಿಕ್ರಿಯಿಸಿದ NWKRTC ಸಂಚಾರ ಅಧಿಕಾರಿ ಕೆ.ಕೆ.ಲಮಾಣಿ, ಬೆಳಗಾವಿ ವಿಭಾಗದಿಂದ ಈವರೆಗೆ 80 ಬಸ್‌ಗಳು ಮಹಾರಾಷ್ಟ್ರಕ್ಕೆ ತೆರಳಬೇಕಿತ್ತು. ಸಂಜೆಯವರೆಗೂ 212 ಬಸ್‌ಗಳು, ಚಿಕ್ಕೋಡಿ ವಿಭಾಗದಿಂದ 150 ಬಸ್​ಗಳು ತೆರಳಬೇಕಿತ್ತು. ಅದೇ ರೀತಿ ಮಹಾರಾಷ್ಟ್ರದಿಂದ 60ರಿಂದ 70 ಬಸ್‌ಗಳು ಬೆಳಗಾವಿಗೆ ಬರಬೇಕಿತ್ತು. ಪೊಲೀಸರ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದರು.
ನಿನ್ನೆ(ಮಂಗಳವಾರ) ಮಹಾರಾಷ್ಟ್ರದ ಕುಡಾಲ ಬಸ್ ನಿಲ್ದಾಣದ ಡಿಪೋದಲ್ಲಿ ಕೆಎಸ್​ಆರ್​ಟಿ ಬಸ್‌ಗೆ ಮಸಿ ಬಳಿದು, ದೊಡ್ಡ ಅಕ್ಷರಗಳಿಂದ ‘ಜೈ ಮಹಾರಾಷ್ಟ್ರ’ ಎಂದು ಬರೆದಿದ್ದಾರೆ. ನಮ್ಮ ಚಾಲಕ ನಿರ್ವಾಹಕರು ಈ ಬಗ್ಗೆ ಎಫ್ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರದಲ್ಲಿಯೇ ನಮ್ಮ 40ರಿಂದ 50 ಬಸ್‌ಗಳು ಇವೆ. ಮಹಾರಾಷ್ಟ್ರದ ಎರಡು ಬಸ್‌ಗಳು ನಮ್ಮ ಡಿಪೋದಲ್ಲಿ ಸೇಫ್ ಆಗಿವೆ. ಬಸ್‌ಗಳ ಸಂಚಾರ ಸ್ಥಗಿತ ಹಿನ್ನೆಲೆ ಬೆಳಗಾವಿ ವಿಭಾಗವೊಂದಕ್ಕೆ 10 ರಿಂದ 15 ಲಕ್ಷ ರೂ. ನಷ್ಟ ಉಂಟಾಗಿದೆ ಎಂದರು.(ದಿಗ್ವಿಜಯ ನ್ಯೂಸ್)
ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಚೀಲದಲ್ಲಿ ಪತ್ನಿಯ ಶವ ತುಂಬಿಕೊಂಡು ಸೈಕಲ್​ನಲ್ಲಿ ಸಾಗಿಸುತ್ತಿದ್ದ ಪತಿ..! ಯಳಂದೂರಲ್ಲಿ ಹೃದಯವಿದ್ರಾವಕ ಘಟನೆ

ಜೂಜಾಟಕ್ಕೆ ತನ್ನನ್ನೇ ಪಣಕ್ಕಿಟ್ಟು ಸೋತು ಪರ ಪುರುಷನ ಪಾಲಾದ 2 ಮಕ್ಕಳ ತಾಯಿ! ಗಂಡನ ಗೋಳು ನೋಡಲಾಗ್ತಿಲ್ಲ…

ಲೇಡಿ ಪಿಎಸ್​ಐ ಕಿರುಕುಳ ಕೊಡುತ್ತಿದ್ದಾರೆ… ಡೆತ್​ನೋಟ್​ ಬರೆದಿಟ್ಟು ನಾಪತ್ತೆಯಾಗಿದ್ದ ಸಿರಿವಾರದ ಯುವಕ 3 ದಿನದ ಬಳಿಕ ಪತ್ತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + twelve =
Remember me
