ಬೆಂಗಳೂರು:ಈತನ ಕೆಲಸ ಎಟಿಎಂ ಮಷೀನ್​ಗಳಿಗೆ ಹಣ ತುಂಬಿಸುವುದು. ಕಳೆದ ಒಂದು ದಶಕದಿಂದ ನಿಯತ್ತಾಗಿ ಈತ ಈ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಏನಾಯಿತೋ ಗೊತ್ತಿಲ್ಲ. ಅಚಾನಕ್​ ಆಗಿ ಮೊಬೈಲ್​ ಸ್ವಿಚ್​ ಆಫ್​ ಮಾಡಿ ಕುಳಿತುಕೊಂಡಿದ್ದ. ಏನಪ್ಪಾ ಇವನ ಸಮಸ್ಯೆ ಎಂದು ಅನುಮಾನಗೊಂಡು ವಿಚಾರಣೆ ಮಾಡಿದಾಗ ಈತನ ಅಸಲಿಯತ್ತು ಬಹಿರಂಗಗೊಂಡಿದೆ.
ಈ ಘಟನೆ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ರಾಜೇಶ್ ಮೇಸ್ತಾ ಎಂನ್ನುವಾತ ಕೃತ್ಯವನ್ನು ಎಸಗಿದ್ದಾನೆ. ಈತ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್​ನ ಎನ್ನುವ ಸಂಸ್ಥೆಯ ಉದ್ಯೋಗಿಯಾಗಿದ್ದ. ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್, ಎಟಿಎಂಗಳಿಗೆ ಹಣ ತುಂಬಿಸುವ ಸಂಸ್ಥೆ. ಕಳೆದ 11 ವರ್ಷದಿಂದ ಈ ಸಂಸ್ಥೆಯಲ್ಲಿ ರಾಜೇಶ್​ ಮೇಸ್ತಾ ಕೆಲಸ ಮಾಡುತ್ತಿದ್ದ.
ಆದರೆ ಜನವರಿ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಈತ ಪೋನ್ ಸ್ವಿಚ್ಡ್ ಅಪ್ ಮಾಡಿ ಎಸ್ಕೇಪ್ ಆಗಿದ್ದ. ಇದರಿಂದ ಅನುಮಾನಗೊಂಡ ಸಂಸ್ಥೆ, ರಾಜೇಶ್​ ಹಣ ತುಂಬಿಸುತ್ತಿದ್ದ ಎಟಿಎಂಗಳ ಆಡಿಟ್ ಮಾಡಿಸಿದೆ. ಆಗ ಆತ 1 ಕೋಟಿ 3 ಲಕ್ಷ ರೂ. ಹಣದ ಸಮೇತ ಪರಾರಿಯಾಗಿರುವುದು ಪತ್ತೆಯಾಗಿದೆ. ಅದು ಹೇಗೆ ಅಂತೀರಾ? ಎಟಿಎಂ ತುಂಬಿಸುವ ಬದಲು ಈತ ಆ ಹಣವನ್ನು ತನ್ನ ಜೊತೆಗೆ ಒಯ್ಯುತ್ತಿದ್ದ. ಸದ್ಯ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
