ಬೆಂಗಳೂರು:ಇಲ್ಲೊಬ್ಬ ಭೂಪ, ಉಚಿತ ಶಿಕ್ಷಣ ಕೊಡಿಸುವ ನೆಪದಲ್ಲಿ ಸಂತ್ರಸ್ತರಿಂದಲೇ ಸಾಲ ಪಡೆದು ಕೋಟಿ ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಆಂಧ್ರ ಮೂಲದ ಶ್ರೀನಿವಾಸುಲು ಎಂಬಾತ ಈ ಪ್ರಕರಣದ ಪ್ರಮುಖ ಆರೋಪಿ. ಈತ GEEK LEARN ಎಂಬ ಕೋಚಿಂಗ್ ಸಂಸ್ಥೆ ಕಟ್ಟಿ ಡಾಟಾ ಸೈನ್ಸ್ ಕೋರ್ಸ್ ಮಾಡಿಸುವ ನೆಪದಲ್ಲಿ ಮೋಸ ಮಾಡಿದ್ದಾನೆ. ಈತ ಪ್ರಮುಖವಾಗಿ 20 ರಿಂದ 25 ವಯಸ್ಸಿನ ಯುವಕ-ಯುವತಿಯರನ್ನು ಟಾರ್ಗೆಟ್​ ಮಾಡಿ ವಂಚಿಸಿದ್ದಾನೆ.
ಇದನ್ನೂ ಓದಿ:ಇನ್​​ಸ್ಟಾಗ್ರಾಂ ಮೂಲಕ ಭಾರತೀಯ ಮಹಿಳೆಗೆ ವಂಚನೆ; ನೈಜೀರಿಯನ್​ ಪ್ರಜೆಗಳ ಬಂಧನ.
ಈ ಶ್ರೀನಿವಾಸುಲು ಮೊದಲಿಗೆ ಉಚಿತ ಶಿಕ್ಷಣ ಕೊಡಿಸುವ ಹೆಸರಲ್ಲಿ ಅನೇಕ ಯುವಕ ಯುವತಿಯನ್ನು ಆಕರ್ಶಿಸಿ ತನ್ನ ಸಂಸ್ಥೆಗೆ ಸೇರಿಕೊಳ್ಳುವಂತೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ಲೋನ್ ಪಡೆದುಕೊಂಡು “ನಾವೇ ಸಾಲವನ್ನು ಕಂತು ಕಂತಾಗಿ ತೀರಿಸುತ್ತೇವೆ” ಎಂದು ನಂಬಿಸುತ್ತಿದ್ದ. ನಂತರ ಕೋರ್ಸ್​ಗೆ ಬೇಕಾದಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಗಳಿಗೆ ಕೊಡಿಸುತ್ತಿದ್ದ. ಆದರೆ ಹಣವನ್ನು ಮಾತ್ರ ತನ್ನ ಖಾತೆಗೆ ವರ್ಗಾವಣೆ ಆಗುವಂತೆ ಮಾಡುತ್ತಿದ್ದ. ಕಡೆಗೆ ಸಾಲವನ್ನು ತೀರಿಸದೇ ಈತ ಒಟ್ಟು 18 ಕೋಟಿ ಗು‌ ಹೆಚ್ಚು ಹಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಉಚಿತ ಥಾಲಿಯ ಆಸೆಗೆ ಬಿದ್ದ ಮಹಿಳೆಗೆ 90,000 ರೂ. ವಂಚನೆ!
ಈ ಭೂಪ ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಮಕ್ಕಳಿಂದ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + eleven =
Remember me
