ಮಂಗಳೂರು: ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಭಾರೀ ಅವಘಡವೊಂದು ಫೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇದನ್ನೂ ಓದಿ:ಬಜರಂಗದಳ ಬ್ಯಾನ್ ಮಾಡ್ತಾರಾ? ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತಾರಾ? ಪರಂ ಹೇಳೋದೇನು?
ಪ್ರಯಾಣಿಕರ ಸಹಿತ ಬೆಳಗ್ಗೆ 8.30ರ ಸುಮಾರಿಗೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ, ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿತ್ತು. ವಿಮಾನ ಇನ್ನೇನು ಕೆಲವೇ ಕ್ಷಣಗಳಲ್ಲಿ ಟೇಕಾಫ್ ಆಗುವ ಸಿದ್ದತೆಯಲ್ಲಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ರೆಕ್ಕೆಯ ಇಂಜಿನ್ ಭಾಗದಲ್ಲಿ ಶಬ್ದ ಉಂಟಾಗಿ ತಾಂತ್ರಿಕ ಸಮಸ್ಯೆಯ ಸೂಚನೆ ಕೊಟ್ಟಿದೆ ಎನ್ನಲಾಗಿದೆ.
ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿದ್ದಾರೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ನಡೆಸಿ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರಿಗೆ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ.
ರಸಗುಲ್ಲ ತಂದ ಆಪತ್ತು; ಸಿಹಿ ಸೇವಿಸಿ 70 ಮಂದಿ ಆಸ್ಪತ್ರೆಗೆ ದಾಖಲು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 17 =
Remember me
