ಬೆಂಗಳೂರು:ರೈತರು ತಮ್ಮ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲೀ ನಾಶ ಮಾಡುವುದಾಗಲೀ ಮಾಡಬಾರದು. ಕರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ರೈತರು ಆತುರಕ್ಕೊಳಗಾಗದೇ ಸ್ವಲ್ಪ ತಾಳ್ಮೆವಹಿಸಿ ಇಲಾಖೆ ನೀಡಿದ ಕ್ರಮ ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ.
ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು. ಫಸಲು ಸಮೀಕ್ಷೆ ನಡೆಸಿ ಫಸಲ್ ಭೀಮಾಗೆ ಒಳಪಡಿಸಬೇಕು ಎಂದಿದ್ದಾರೆ.
ರಾಯಚೂರು, ಕೊಪ್ಪಳ ಮತ್ತು ಮೈಸೂರಿನ ಕೆಲ ಭಾಗ ಸೇರಿದಂತೆ ಹಲವೆಡೆ ಭತ್ತ ಕಟಾವು ಯಂತ್ರೋಪಕರಣಗಳನ್ನು ಗಡಿಯಲ್ಲಿ ನಿಲ್ಲಿಸಬಾರದು. ರೈತರಿಗೆ ಬೇಕಾದ ಬೀಜ, ಗೊಬ್ಬರ ಔಷಧಿ ಮಾರಾಟಕ್ಕೆ ಮುಕ್ತ ಅವಕಾಶ. ಪೈಪ್ ಅಂಗಡಿಗಳನ್ನು‌ ತೆರಯಲು ಮಾರಾಟ ಮಾಡಲು ಯಾವುದೇ ಅಡೆತಡೆಯಿಲ್ಲ. ಮುಂಗಾರು ಬಿತ್ತನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ‌‌. ಎಲ್ಲಾ ದಿನಸಿ ತರಕಾರಿ ಅಂಗಡಿ ತೆರೆದಿವೆ. ರೈತರ ಜೀವ ಕುಟುಂಬದ ಹೊಣೆ ಅವರ ಮೇಲೆ ಇರುವುದರಿಂದ ರೈತರು ಮುಗಿಬೀಳದೇ ಆರೋಗ್ಯದ ಮೇಲೆ ಕಾಳಜಿ ಹೊಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.
ರೈಲ್ವೆ ಗೂಡ್ಸ್ ಮೂಲಕ ಸಾಗಾಣಿಕೆ ಮಾಡಬಹುದು. ಹಣ್ಣುಗಳನ್ನು ತಿನ್ನುವುದರಿಂದ ಖಾಯಿಲೆ ಬರುವುದಿಲ್ಲ. ಕಲ್ಲಂಗಡಿ ಹಣ್ಣಾಗಲೀ ಅನಾನಸ್ ಆಗಲಿ ತಿಂದರೆ ಕೊರೊನಾ ಬರುವುದಿಲ್ಲ. ತಪ್ಪು ಮಾಹಿತಿ ಅಪಪ್ರಚಾರಕ್ಕೆ ಬೆಲೆಕೊಡಬಾರದು. ನಿಂಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿದೆ. ಕಲ್ಲಂಗಡಿ, ಅನಾನಸ್ ನಿಂಬೆಹಣ್ದು ಉಪಯೋಗಿಸುವುದು ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಜನರು ಹೆಚ್ಚೆಚ್ಚು ಹಣ್ಣು ಬಳಸಿ ಎಂದು ಮಾಹಿತಿ ನೀಡಿದರು.
ಆತುರಕ್ಕೆ ಒಳಪಟ್ಟಾಗಲಿ ಅಥವಾ ಅಪಪ್ರಚಾರಕ್ಕಾಗಲಿ ರೈತರು ಕಿವಿಕೊಡಬಾರದು. ಯಾರೂ ಆತುರಕ್ಕೆ ಬುದ್ಧಿಕೊಟ್ಟು ಬೆಳೆಗಳನ್ನು ನಾಶ ಮಾಡುವುದಾಗಲಿ ರಸ್ತೆಗೆ ಸುರಿಯುವುದಾಗಲೀ ಮಾಡಬಾರದು. ಶಿಥಲೀಕರಣ ಘಟಕ ಎಪಿಎಂಸಿ ವ್ಯವಸ್ಥೆ ಬಳಸಿಕೊಳ್ಳಬೇಕು ಎಂದು ಕೃಷಿ ಸಚಿವರು ಸ್ಪಷ್ಟ‌ಮಾಹಿತಿ ನೀಡಿದರು.
ಪೊಲೀಸರಾಗಲೀ ಬೇರೆ ಯಾರೇ ಆಗಲೀ ಗ್ರೀನ್ ಪಾಸ್ ಹೊಂದಿದ ರೈತರ ಪರಿಕರ ಫಸಲು ಮಾರಾಟ ಸಾಗಾಣಿಕೆಗೆ ತಡೆ ಮಾಡುವಂತಿಲ್ಲ ಎಂದು ಸಚಿವರು ಪುನರುಚ್ಚರಿಸಿದರು.
ಕರೊನಾ ವಿರುದ್ಧ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿ ಮಡಿದರೆ 1 ಕೋಟಿ ರೂ. ಪರಿಹಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
