ದೇವನಹಳ್ಳಿ:ಏರ್ಪೋರ್ಟ್​ನಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ಆಗಮಿಸಿದ ಸಚಿವ ಡಾ.ಕೆ.ಸುಧಾಕರ್, ಬಿಜೆಪಿಗೆ ಮತ್ತಷ್ಟು ಜನ ಶಾಸಕರು ಬಂದು ಸೇರಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.
ಈ ಹಿಂದೆ, ‘ಬಿಜೆಪಿ ಸೇರಿದ್ದ 18 ಜನರು ಸಂಪರ್ಕದಲ್ಲಿದ್ದಾರೆ’ ಎಂದು ಕಾಂಗ್ರೆಸ್ ಹೇಳಿಕೆ ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಲೋಕಾರೂಢಿಯಾಗಿ ಕಾಂಗ್ರೆಸ್ ಅವರು ಹೇಳಿದ್ದಾರೆ. ಇವೆಲ್ಲ ರಾಜಕಾರಣದ ಹೇಳಿಕೆಗಳು ಗಂಭೀರವಾಗಿ ತೆಗೆದುಕೊಳ್ಳಬಾರದು’ ಎಂದು ಹೇಳಿದರು.
‘ಜೆಡಿಎಸ್ ಮತ್ತು ಕಾಂಗ್ರೆಸ್​ನಿಂದ ಬಂದ 18 ಜನರ ಜೊತೆಗೆ ಮತ್ತಷ್ಟು ಸಂಖ್ಯೆ ಹೆಚ್ಚಾಗುತ್ತೆ ಹೊರತು ಕಡಿಮೆಯಾಗಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ನಮ್ಮ‌ ಪಕ್ಷಕ್ಕೆ ಬರಲಿದ್ದಾರೆ. ಈಗಾಗಲೆ ಇಬ್ಬರು ಮಾಜಿ ಎಂಪಿ, ಹಿರಿಯ ಐಎಎಸ್ ಅಧಿಕಾರಿ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿನ ಮಾಜಿ ಶಾಸಕರು ಬಂದಿದ್ದಾರೆ. ನೋಡ್ತಿರಿ ಇನ್ನೂ ಯಾರೆಲ್ಲ ಬರ್ತಾರೆ ಅಂತ’ ಎಂದು ಮುಂದಿನ ದಿನಗಳಲ್ಲಿ ಮತ್ತಷ್ಟು ಶಾಸಕರು ಬಿಜೆಪಿಗೆ ಬರುವುದಾಗಿ‌ ಪರೋಕ್ಷವಾಗಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − thirteen =
Remember me
