ಬೀದರ್:ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲಿಯೇ ಆಗಲೀ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೆ ಅಕ್ರಮವಾಗಿ ಮರ ಕಡಿಯುವುದು ಅಪರಾಧ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ. ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಹಸೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಕ್ರಮವಾಗಿ ಮರ ಕಡಿದ ಆರೋಪ: ಪ್ರತಾಪ್​ ಸಿಂಹ ಸಹೋದರನನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಅಯೋಧ್ಯೆ ರಾಮ ಮಂದಿರ ಬಳಿಕ ವಾಲ್ಮೀಕಿ ಮಂದಿರವೂ ನಿರ್ಮಾಣವಾಗಲಿ: ಸತೀಶ್​ ಜಾರಕಿಹೊಳಿ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
