ಬೆಂಗಳೂರು:ಹೆಚ್ಚುವರಿ ಉಪಮುಖ್ಯಮಂತ್ರಿ ಕೇಳಬಾರದೇ ನಾವು? ಕೇಳಿದರೆ ತಪ್ಪಾಗುತ್ತದೆಯೇ? ವಾರ್ನಿಂಗ್ ನಾನ್ ಕೇಳ್ತೀನೇನ್ರೀ, ರಾಜಣ್ಣ ರಾಜಣ್ಣಾನೇ. ಬಾಯಿಗೆ ಬೀಗ ಎಲ್ಲಾರು ಹಾಕಿಕೊಳ್ಳಬೇಕು. ಎಲ್ಲರು ಸುಮ್ಮನೆ ಇದ್ದರೆ ನಾನೂ ಸುಮ್ಮನೆ ಇರುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಇದನ್ನೂ ಓದಿ:ಮಕ್ಕಳಿಗೆ ಪುಸ್ತಕ ಅಭಿರುಚಿ ಬೆಳೆಸಬೇಕಿದೆ: ಐಎಎಸ್​ ಅಧಿಕಾರಿ ವಿದ್ಯಾ ಹೇಳಿಕೆ
ಸಿಎಂ, ಡಿಸಿಎಂ ವಿಚಾರವಾಗಿ ಧ್ವನಿ ಎತ್ತಿದ್ದರೆ, ಪಕ್ಷದ ಶಿಸ್ತು ಕಾಪಾಡಲು ನೊಟೀಸ್ ನೀಡಬೇಕಾಗುತ್ತದೆ ಎನ್ನುತ್ತಾರೆ ಡಿಕೆಶಿ. “ನೋಟೀಸ್ ಕೊಡುತ್ತಾರಾ? ಕೊಡಲಿ. ಕೊಟ್ಟಿದ ಬಳಿಕ ಮಾತಾಡುತ್ತೇನೆ.‌ ವಿವಾದವಾಗಬಾರದು ಅಂತಾ ಹೇಳಿರುತ್ತಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತ ಹೇಳಿದರೆ ಕೇಳಿಕೊಂಡು ಸುಮ್ಮನೆ ಇರಬೇಕಾ? ಶಾಮನೂರು ಶಿವಶಂಕರಪ್ಪ ಮಾಡಿ ಅಂತಾ ಅವರ ಸ್ವಾಮಿಗಳು ಕೇಳುತ್ತಾರೆ. ಸತೀಶ್ ಜಾರಕಿಹೊಳಿ ಸಿಎಂ ಮಾಡಿ ಅಂತ ಅವರ ಸ್ವಾಮೀಜಿಗಳು ಹೇಳುತ್ತಾರೆ. ಸ್ವಾಮೀಜಿಗಳು ಹೇಳೋದನ್ನು ಕೇಳೋದಕ್ಕೆ ಆಗುತ್ತಾ?” ಎಂದಿದ್ದಾರೆ.
“ಚಂದ್ರಶೇಖರ ಸ್ವಾಮೀಜಿ ಹೇಳಿರೋದು ಪ್ರಜಾಪ್ರಭುತ್ವಕ್ಕೆ ಅವಮಾನ. ನಾನು ಸಿಎಂ ಪರವಾಗಿ ಅಂತಲ್ಲ. ಪ್ರಜಾಪ್ರಭುತ್ವ ಪರವಾಗಿ ಇದ್ದೀನಿ. ನಾನು ಹಗರಣ ಮಾಡಿದ್ದರೆ ತನಿಖೆ ಮಾಡಲಿ. ಬಡವರ ಪರ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ. ಅದಕ್ಕೆ ಅವರ ಜತೆ ನಾವಿದ್ದೇವೆ. ಸ್ವಾಮೀಜಿಗಳದ್ದು ಅವರ ಜಾಗ ಅವರದ್ದು. ಎಂಪಿಯಾಗಿ ಡಿ.ಕೆ. ಸುರೇಶ್ ಪರಿಣಾಮಕಾರಿಯಾಗಿ ಕೆಲಸ ಮಾಡಿರೋರಲ್ಲಿ ಪ್ರಥಮ. ಆದರೂ ಯಾರು ಸೋಲಿಸಿದ್ದು, ಇವರೆಲ್ಲಾ ಸ್ವಾಮೀಜಿಗಳು ಒಂದಾಗಿ ಸೋಲಿಸಿದ್ದರು” ಎಂದು ಹೇಳಿದರು.
ಇದನ್ನೂ ಓದಿ:ಪ್ರಧಾನಿ ಮೋದಿಯವರನ್ನು ಮದುವೆಗೆ ಆಹ್ವಾನಿಸಿದ ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್​ ಕುಮಾರ್
“ದೇವೇಗೌಡರು ಹುಟ್ಟುಹಾಕಿದ ಸ್ವಾಮೀಜಿಗಳು ಇವರು. ಯಾರನ್ನು ಸಿಎಂ ಮಾಡಬೇಕು ಅಂತ ಶಾಸಕರು, ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸ್ವಾಮೀಜಿಗಳು ಹೇಳಿದಂತೆ ಮಾಡಲು ಸಾಧ್ಯವಿಲ್ಲ” ಎಂದರು.
ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್​ರನ್ನು ಕಪಿಲ್ ದೇವ್​​ಗೆ ಹೋಲಿಸಿದ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
